Home ಟಾಪ್ ಸುದ್ದಿಗಳು ಮುಡಾ ಪ್ರಕರಣ: ಸಿದ್ದರಾಮಯ್ಯವರೇ ನೀವು ಈ ಪ್ರಶ್ನೆಗಳಿಗೆ ಉತ್ತರ ಕೊಡಿ; ಆರ್‌ ಆಶೋಕ್‌

ಮುಡಾ ಪ್ರಕರಣ: ಸಿದ್ದರಾಮಯ್ಯವರೇ ನೀವು ಈ ಪ್ರಶ್ನೆಗಳಿಗೆ ಉತ್ತರ ಕೊಡಿ; ಆರ್‌ ಆಶೋಕ್‌

ಬೆಂಗಳೂರು: ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯವರೇ ನೀವು ಈ ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಕೇಳಿದ್ದಾರೆ.

  1. 2013ರ ಚುನಾವಣಾ ಅಫಿಡವಿಟ್ ನಲ್ಲಿ ತಮ್ಮ ಪತ್ನಿಯ ಆಸ್ತಿ ಉಲ್ಲೇ ಖ ಮಾಡದೆ ತಪ್ಪು ಮಾಹಿತಿ ನೀಡುತ್ತೀ ರಿ. ನಂತರ 2018ರಲ್ಲಿ ಅದರ ಮಾರುಕಟ್ಟೆ ಮೌಲ್ಯ 25 ಲಕ್ಷ ರೂ ಎಂದು ನಮೂದಿಸಿದ್ದೀರಿ. 5 ವರ್ಷ ಗಳಾದ ಮೇಲೆ ದಿಢೀರನೆ ಆಸ್ತಿ ಹೊಂದಿರುವ ಬಗ್ಗೆ ಜ್ಞಾನೋ ದಯವಾಯಿತು?
  2. ಈಗ ಹಗರಣ ಬೆಳಕಿಗೆ ಬಂದ ಮೇಲೆ 63 ಕೋಟಿ ರೂ. ಕೊಡಿ ಸೈಟು ಬಿಟ್ಟುಕೊಡುತ್ತೇನೆ ಎಂದು ಹೇಳುತ್ತೀರಿ. 2018ರಲ್ಲಿ 25 ಲಕ್ಷ ಇದ್ದ ಆಸ್ತಿ ಮೌಲ್ಯ, 2024ರಲ್ಲಿ 63 ಕೋಟಿ ಆಗಲು ಹೇಗೆ ಸಾಧ್ಯ? ಇದೇನಾದರೂ ರಾಹುಲ್ ಗಾಂಧಿ ಅವರ ಆಲೂಗಡ್ಡೆ ಹಾಕಿ ಚಿನ್ನ ತೆಗೆಯುವಯೋ ಜನೆಯ ಭಾಗವಾ?
  3. 50:50ರ ಅನುಪಾತದಲ್ಲಿ ಅಭಿವೃದ್ಧಿಪಡಿಸಿದ ನಿವೇ ಶನಗಳನ್ನು ಪರಿಹಾರ ರೂಪದಲ್ಲಿ ಕೊಡುವುದು ಬೇಡ ಎಂದು ನಗರಾಭಿವೃದ್ಧಿ ಇಲಾಖೆ ಆದೇಶವಿದ್ದರೂ ಅದನ್ನ ಉಲ್ಲಂಘಿಸಿ ಮೂಡಾ ಅಧ್ಯಕ್ಷ ಮರಿಗೌಡ ಅವರು ಹಗರಣದ ಬಾಗಿಲನ್ನು ತೆಗೆದಿದ್ದು ಏಕೆ? ಇದರ ಹಿಂದೆ ಯಾವ ಪ್ರಭಾವಿ ಶಕ್ತಿ ಸಿದ್ಧರಾಮಯ್ಯವರೇ ನೀವು ಈ ಪ್ರಶ್ನೆಗಳಿಗೆ ಉತ್ತರ ಕೊಡಿ ? ಈ ಪ್ರಶ್ನೆಗಳಿಗೆ ಉತ್ತರ ಕೊಡಿ ಸಿದ್ದರಾಮಯ್ಯ ಎಂ ದು ಅಶೋಕ್ ಕೇಳಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕಮಾಧ್ಯಮ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿದ್ದಾರೆ.
Join Whatsapp
Exit mobile version