ಮುಡಾ ಪ್ರಕರಣ: ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನ ವಿಚಾರಣೆಗೆ ಹಾಜರು

Prasthutha|

ಮೈಸೂರು: ಮುಡಾ ಪ್ರಕರಣದ ಮೂರನೇ ಆರೋಪಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾಮೈದ ಬಿ.ಎಂ. ಮಲ್ಲಿಕಾರ್ಜುನ ಸ್ವಾಮಿ ಹಾಗೂ ನಾಲ್ಕನೇ ಆರೋಪಿ ಜೆ. ದೇವರಾಜು ಇಲ್ಲಿನ ಲೋಕಾಯುಕ್ತ ಪೊಲೀಸ್ ಕಚೇರಿಗೆ ಗುರುವಾರ ವಿಚಾರಣೆಗೆ ಹಾಜರಾದರು.

- Advertisement -


ಅವರನ್ನು ಲೋಕಾಯುಕ್ತ ಎಸ್.ಪಿ. ಟಿ.ಜೆ. ಉದೇಶ್ ನೇತೃತ್ವದ ತಂಡವು ವಿಚಾರಣೆ ನಡೆಸುತ್ತಿದೆ.


ಈ ಇಬ್ಬರು ಆರೋಪಿಗಳಿಗೆ ಲೋಕಾಯುಕ್ತ ಪೊಲೀಸರು ಬುಧವಾರವಷ್ಟೇ ನೋಟಿಸ್ ನೀಡಿ, ವಿಚಾರಣೆಗೆ ಬರುವಂತೆ ಸೂಚಿಸಿದ್ದರು.



Join Whatsapp