ಮುಡಾ, ಸಿದ್ದಾರ್ಥ ಟ್ರಸ್ಟ್ ಪ್ರಕರಣ; ನಮ್ಮ ಹೋರಾಟಗಳಿಗೆ ಭ್ರಷ್ಟರು ಮಣಿಯುತ್ತಿದ್ದಾರೆ: ಬಿಜೆಪಿ

Prasthutha|

ಬೆಂಗಳೂರು: ಮುಡಾ ಹಗರಣದಲ್ಲಿ ಭಾಗಿಯಾಗಿರುವ ಸಿದ್ದರಾಮಯ್ಯ ಸೇರಿದಂತೆ ಹಾಗೂ ಸಿದ್ದಾರ್ಥ ಟ್ರಸ್ಟ್ ಗೆ ಕೆಐಎಡಿಬಿಯಿಂದ ಮಂಜೂರಾಗಿದ್ದ 5 ಎಕರೆ ಸಿಎ ನಿವೇಶನದ ಹಗರಣಕ್ಕೆ ಸಂಬಂಧಿಸಿದಂತೆ ಯಾರೊಬ್ಬರೂ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬಿಜೆಪಿ ಹೇಳಿದೆ.

- Advertisement -


ಈ ಕುರಿತು ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ಬಿಜೆಪಿ, ನಾವು ನಡೆಸುತ್ತಿರುವ ಹೋರಾಟಗಳಿಗೆ ಭ್ರಷ್ಟರು ಮಣಿಯುತ್ತಿದ್ದಾರೆ ಎಂದು ಹೇಳಿದೆ.


ಖರ್ಗೆ ಅವರ ಕುಟುಂಬದ ಸಿದ್ದಾರ್ಥ ಟ್ರಸ್ಟ್ ಗೆ ಕೆಐಎಡಿಬಿಯಿಂದ ಮಂಜೂರಾಗಿದ್ದ 5 ಎಕರೆ ಸಿಎ ನಿವೇಶನವನ್ನು ಬೇಷರತ್ ಹಿಂದಿರುಗಿಸಿರುವ ನಿಲುವು ಗಮನಿಸಿದರೆ ಅಕ್ರಮ ಮಂಜೂರಾತಿ ಪ್ರಕರಣ ನ್ಯಾಯಾಲಯದ ಮೆಟ್ಟಿಲು ಏರುವ ಮುನ್ನ ಖರ್ಗೆ ಕುಟುಂಬ ಮುಡಾ ಹಗರಣದ ರೂವಾರಿ ಸಿದ್ದರಾಮಯ್ಯನವರ ಹಾದಿಯನ್ನೇ ತುಳಿದಿರುವುದು ಸಾಬೀತಾಗುತ್ತಿದೆ ಎಂದಿದೆ.

- Advertisement -


ಕಾಂಗ್ರೆಸ್ ಸರ್ಕಾರದ ಹಗರಣಗಳಲ್ಲಿ ಭಾಗಿಯಾದವರು, ಕಾಂಗ್ರೆಸ್ ಸರ್ಕಾರದ ಸರಣಿ ಭ್ರಷ್ಟಚಾರಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸೇರಿದಂತೆ ಭಾಗಿಯಾಗಿರುವ ಅನೇಕರು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎನ್ನುವುದನ್ನು ಕಾಲವೇ ಉತ್ತರ ಹೇಳಲಿದೆ. ಆಮಿಷಗಳನ್ನು ಒಡ್ಡಿ ಅಧಿಕಾರಕ್ಕೆ ಬಂದು ಲೂಟಿಯನ್ನೇ ಗುರಿಯಾಗಿಸಿಕೊಂಡಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಿಸುವವರೆಗೂ ಬಿಜೆಪಿ ನಿರಂತರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದೆ.



Join Whatsapp