Home ಟಾಪ್ ಸುದ್ದಿಗಳು ಮುಧೋಳ: ಮುಸ್ಲಿಂ ಯುವಕನ ಹತ್ಯೆ ಪ್ರಕರಣ; ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಮುಧೋಳ: ಮುಸ್ಲಿಂ ಯುವಕನ ಹತ್ಯೆ ಪ್ರಕರಣ; ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಬಾಗಲಕೋಟೆ: ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತನಿಂದ ಕೊಲೆಯಾದ ಮಹಿಬೂಬ್ ಅವರ ಮೃತದೇಹವನ್ನು ನಗರದ ಮುಖ್ಯ  ವೃತ್ತದಲ್ಲಿಟ್ಟು  ಮುಸ್ಲಿಂ ಸಮುದಾಯದ ಪ್ರಮುಖರು ಪ್ರತಿಭಟನೆ ನಡೆಸಿದ್ದಾರೆ.

ಹತ್ಯೆಯ ಪ್ರಮುಖ ಆರೋಪಿಯ ಬಂಧನವಾಗಿದ್ದು, ಇತರ  ಆರೋಪಿಗಳನ್ನು ಬಂಧಿಸಿ  ಅವರ ವಿರುದ್ಧ ಕಠಿಣ  ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ. ಪರಿಸ್ಥಿತಿಯ ಉದ್ವಿಗ್ನತೆಯನ್ನು ಅರಿತ ಪೊಲೀಸರು  ಪ್ರತಿಭಟನಾ ಪ್ರದೇಶವನ್ನು ಬ್ಯಾರಿಕೇಡ್ ಮಾಡಿದ್ದಾರೆ.

Join Whatsapp
Exit mobile version