ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಹೆಬ್ಬರಿಗೆ ಗ್ರಾಮದ ಸುರೇಶ್ ಹೆಬ್ಬರಿಗೆ ಅವರ ಮನೆ ಹತ್ತಿರ 12 ಅಡಿ ಉದ್ದದ ಕಾಳಿಂಗ ಸರ್ಪ ಕಂಡು ಬಂದಿದ್ದು, ಅರಣ್ಯ ಇಲಾಖೆ ಸಮ್ಮುಖದಲ್ಲಿ ಹಿಡಿದು ಸುರಕ್ಷಿತವಾಗಿ ಚಾರ್ಮಾಡಿ ಅಭಯಾರಣ್ಯ ಕ್ಕೆ ಬಿಡಲಾಯಿತು.
![](https://prasthutha.com/wp-content/uploads/2022/06/king-cobra.png)
ಉರಗ ತಜ್ಞಸ್ನೇಕ್ ಆರೀಫ್ ಹಾವನ್ನು ಹಿಡಿದು ಅರಣ್ಯ ಇಲಾಖೆಯವರಿಗೆ ಹಸ್ತಾಂತರಿಸಿದರು. ಮಲೆನಾಡು ಭಾಗದಲ್ಲಿ ಹೆಚ್ಚು ಪ್ರಮಾಣದಲ್ಲಿ ಕಾಳಿಂಗ ಸರ್ಪಗಳು ಕಾಣಿಸುತ್ತಿದ್ದು ಇವುಗಳನ್ನು ಸೆರೆ ಹಿಡಿದು ಸುರಕ್ಷಿತವಾಗಿ ಅರಣ್ಯ ಪ್ರದೇಶದಲ್ಲಿ ಬಿಡಲಾಗುತ್ತಿದೆ.