Home ಟಾಪ್ ಸುದ್ದಿಗಳು ಚಿಕ್ಕಮಗಳೂರು: ಪಿಕ್ನಿಕ್ ಮುಗಿಸಿ ಹಿಂದಿರುಗುತ್ತಿದ್ದ ಕಾಲೇಜು ಬಸ್ ಪಲ್ಟಿ| ಐವರು ವಿದ್ಯಾರ್ಥಿಗಳಿಗೆ ಗಾಯ

ಚಿಕ್ಕಮಗಳೂರು: ಪಿಕ್ನಿಕ್ ಮುಗಿಸಿ ಹಿಂದಿರುಗುತ್ತಿದ್ದ ಕಾಲೇಜು ಬಸ್ ಪಲ್ಟಿ| ಐವರು ವಿದ್ಯಾರ್ಥಿಗಳಿಗೆ ಗಾಯ

ಚಿಕ್ಕಮಗಳೂರು: ಕಾಲೇಜು ಬಸ್ ಪಲ್ಟಿಯಾಗಿ ಐವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡದಿಂದ ಪಿಕ್ನಿಕ್ ಮುಗಿಸಿಕೊಂಡು ಹಿಂದಿರುಗುವಾಗ ಕಾಲೇಜು ವಾಹನ ಪಲ್ಟಿಯಾಗಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಹರೀಶ್ ಪಿ.ಯು. ಕಾಲೇಜಿನ ಹತ್ತು ವಿದ್ಯಾರ್ಥಿಗಳು ಇಂದು(ಜ.15) ದೇವರಮನೆ ಗುಡ್ಡಕ್ಕೆ ಪಿಕ್ನಿಕ್ ಹೋಗಿದ್ದರು. ಪಿಕ್ನಿಕ್ ಮುಗಿಸಿಕೊಂಡು ಹಿಂದಿರುಗುವಾಗ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾಲೇಜು ಬಸ್ ಪಲ್ಟಿಯಾಗಿದೆ.  

ಘಟನೆಯಲ್ಲಿ ಗಾಯಗೊಂಡ ಐವರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

Join Whatsapp
Exit mobile version