ಮಹಾಲಕ್ಷ್ಮಿ ಬರ್ಬರ ಕೊಲೆ ಕೇಸ್: ಆರೋಪಿ ಮುಕ್ತಿ ರಂಜನ್ ಡೆತ್ ನೋಟ್ ಪತ್ತೆ, ಹತ್ಯೆ ಕಾರಣ ಬಯಲು..!

Prasthutha|

ಬೆಂಗಳೂರು: ವೈಯಾಲಿಕಾವಲ್ ನ ಮನೆಯೊಂದರ ಫ್ರಿಡ್ಜ್ ನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿ ಎಂಬಾಕೆಯ ದೇಹ ತುಂಡು ತುಂಡು ಮಾಡಿ ಬರ್ಬರವಾಗಿ ಹತ್ಯೆ ಮಾಡಿ ಇಡಲಾಗಿತ್ತು. ಈ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಹಲವು ಆಯಾಮದಲ್ಲಿ ತನಿಖೆ ಆರಂಭಿಸಿದ್ದರು.

- Advertisement -

ಆದರೆ ಆರೋಪಿಯ ಪತ್ತೆ ಮಾಡಲು ಹೊರ ರಾಜ್ಯಕ್ಕೆ ಹೋದ ಪೊಲೀಸರಿಗೆ ಆತ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ತಿಳಿದು ಬಂದಿದೆ. ಜೊತೆಗೆ ಡೆತ್ ನೋಟ್ ಪತ್ತೆಯಾಗಿದೆ.

ಈ ಡೆತ್ ನೋಟ್​ನಲ್ಲಿ ತಾನೇ ಕೊಲೆ ಮಾಡಿರೋದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಯಾವ ರೀತಿ ಕೊಲೆ ಮಾಡಿದ? ಏಕೆ ಕೊಲೆ ಮಾಡಿದ ಎಂಬ ವಿಚಾರಗಳ ಬಗ್ಗೆ ಮೃತ ಆರೋಪಿ ಸತ್ಯ ಬಿಚ್ಚಿಟ್ಟಿದ್ದಾನೆ.

- Advertisement -

ಮಹಿಳೆ ಕೊಲೆ ಪ್ರಕರಣದಲ್ಲಿ ಒರಿಸ್ಸಾ ಮೂಲದ ಮುಕ್ತಿ ರಂಜನ್ ರಾಯ್ ಎಂಬಾತನ ಮೇಲೆ ಪೊಲೀಸರಿಗೆ ಅನುಮಾನ ಮೂಡಿತ್ತು. ಈತನೇ ಈ ಕೃತ್ಯ ಎಸಗಿರೊ ಶಂಕೆ ವ್ಯಕ್ತವಾಗಿತ್ತು. ಆತನಿಗಾಗಿ ಹಲವು ಕಡೆ ಹುಡುಕಾಡಿದ್ದ ಪೊಲೀಸರಿಗೆ ಆತ ಓರಿಸ್ಸಾಗೆ ತೆರಳಿರೊ ಮಾಹಿತಿ ಸಿಕ್ಕಿತ್ತು. ಸಿಕ್ಕ ಮಾಹಿತಿ ಆಧರಿಸಿ ಒರಿಸ್ಸಾಗೆ ತೆರಳಿದ್ದ ಪೊಲೀಸರಿಗೆ ಈಗ ಶಾಕ್ ಆಗಿದ್ದು, ಮುಕ್ತಿ ರಂಜನ್ ರಾಯ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆರೋಪಿ ಬಳಿ ಸಿಕ್ಕಿರುವ ಡೈರಿಯಲ್ಲಿ ಡೆತ್ ನೋಟು ಪತ್ತೆಯಾಗಿದೆ.

ರಂಜನ್ ಡೆತ್ ನೋಟ್ ಬರೆದಿಟ್ಟು ಸ್ಮಶಾನದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಡೆತ್ ನೋಟ್​ನಲ್ಲೇನಿದೆ?
ಸೆಪ್ಟಂಬರ್ 3ರಂದು ಪ್ರೇಯಸಿ ಮಹಾಲಕ್ಷ್ಮೀಯನ್ನು ಹತ್ಯೆ ಮಾಡಿದ್ದೇನೆ ಎಂದು ಮಹಾಲಕ್ಷ್ಮೀ ಹತ್ಯೆ ಕುರಿತು ರಂಜನ್ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾನೆ. ಸೆಪ್ಟಂಬರ್‌ 3 ರಂದು ಆಕೆಯ ಮನೆಗೆ ಹೋದಾಗ ಕೃತ್ಯ ಎಸಗಿದ್ದಾಗಿ ಬರೆದಿದ್ದಾನೆ. ವೈಯಕ್ತಿಕ ವಿಚಾರಗಳಿಗೆ ಆಕೆ ಜೊತೆ ಜಗಳವಾಯಿತು. ಆಗ ಆಕೆ ಹಲ್ಲೆ ನಡೆಸಿದಳು, ಇದರಿಂದ ಕೋಪಗೊಂಡು ಆಕೆಯನ್ನು ಕೊಂದೆ. ಆ ಬಳಿಕ 59 ಪೀಸ್ ಮಾಡಿ ಫ್ರಿಡ್ಜ್‌ನಲ್ಲಿ ಇರಿಸಿದ್ದೆ. ಆಕೆಯ ವರ್ತನೆಯಿಂದ ಬೇಸತ್ತು ಕೃತ್ಯ ಎಸಗಿದ್ದೇನೆ ಎಂದು ಡೆತ್ ನೋಟ್​ನಲ್ಲಿ ಕೊಲೆ ಮಾಡಲು ಕಾರಣವೇನೆಂಬುದನ್ನು ರಂಜನ್ ಬಹಿರಂಗಪಡಿಸಿದ್ದಾನೆ.



Join Whatsapp