ಮುಲ್ಕಿ: ಮುಸ್ಲಿಮ್ ಯುವಕನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಸಂಘಪರಿವಾರದ ಕಾರ್ಯಕರ್ತರು

Prasthutha|

ಮುಲ್ಕಿ: ಮುಸ್ಲಿಮ್ ಯುವಕನಿಗೆ ಸಂಘಪರಿವಾರದ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆರೆಕಾಡು ಎಂಬಲ್ಲಿ ನಡೆದಿದೆ.

- Advertisement -

ಸಂಘಪರಿವಾರದ ಕಾರ್ಯಕರ್ತರಿಂದ ಹಲ್ಲೆಗೊಳಗಾದ ಯುವಕನನ್ನು ಹಳೆಯಂಗಡಿಯ ಕೊಪ್ಪಳ ನಿವಾಸಿ ದಾವೂದ್ ಎಂದು ಗುರುತಿಸಲಾಗಿದೆ.

ದಾವೂದ್ ನನ್ನು ಕೆರೆಕಾಡು ಸ್ಮಶಾನದ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಸಂತ್ರಸ್ತನನ್ನೇ ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿರುವುದಾಗಿ ವರದಿಯಾಗಿದೆ.

- Advertisement -

ಕಳೆದ ನವೆಂಬರ್ ನಲ್ಲಿ ಇದೇ ಪ್ರದೇಶದ ಎಸ್ ಕೋಡಿ ಎಂಬಲ್ಲಿ ಸಂಘಪರಿವಾರದ ಕಾರ್ಯಕರ್ತರು ಅನ್ಯಮತೀಯ ಯುವಕನಿಗೆ ಹಲ್ಲೆ ನಡೆಸಿದ್ದರು ಎಂದು ತಿಳಿದುಬಂದಿದೆ.

Join Whatsapp