ಮುಂಬೈಯನ್ನು ಕರ್ನಾಟಕಕ್ಕೆ ಸೇರಿಸಿ, ಕೇಂದ್ರಾಡಳಿತ ಪ್ರದೇಶ ಮಾಡಿ : ಡಿಸಿಎಂ ಲಕ್ಷ್ಮಣ್ ಸವದಿ

Prasthutha|

ಬೆಂಗಳೂರು : ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕೆಂಬ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮಾತಿಗೆ, ಕರ್ನಾಟಕ ಡಿಸಿಎಂ ಲಕ್ಷ್ಮಣ್ ಸವದಿ ತಿರುಗೇಟು ನೀಡಿದ್ದಾರೆ. ಮುಂಬೈಯನ್ನು ಕರ್ನಾಟಕಕ್ಕೆ ಸೇರಿಸಬೇಕು, ಅಲ್ಲಿ ವರೆಗೆ ಅದನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

- Advertisement -

ನನ್ನ ಕ್ಷೇತ್ರದ ಮೊದಲ ಶಾಸಕ ಮುಂಬೈ ವಿಧಾನಸಭೆಗೆ ಹೋಗಿದ್ದರು. ಮುಂಬೈನಲ್ಲಿ ನಮ್ಮ ಆಸ್ತಿ ಇದೆ. ನಾವು ಮುಂಬೈಯನ್ನು ಕರ್ನಾಟಕದ ಭಾಗ ಎಂದು ತೀರ್ಮಾನಿಸಿದ್ದೇವೆ. ಹೀಗಾಗಿ ಮುಂಬೈಯನ್ನು ಕರ್ನಾಟಕಕ್ಕೆ ಸೇರಿಸಿ ಎಂದು ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಕರ್ನಾಟಕದ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಎಂಬುದಾಗಿ ಘೋಷಿಸಬೇಕು ಎಂದು ನಿನ್ನೆ ಉದ್ಧವ್ ಠಾಕ್ರೆ ಪ್ರತಿಪಾದಿಸಿದ್ದರು.

Join Whatsapp