Home ಜಾಲತಾಣದಿಂದ ಮುನಿರತ್ನ ಸ್ಪರ್ಧೆ ಹಿನ್ನೆಲೆ| ಅಳಿಯ ರಿಷ್ಯಂತ್ ಸೇರಿ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಮುನಿರತ್ನ ಸ್ಪರ್ಧೆ ಹಿನ್ನೆಲೆ| ಅಳಿಯ ರಿಷ್ಯಂತ್ ಸೇರಿ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ದಾವಣಗೆರೆ: ಮಾಜಿ ಸಚಿವ ಮುನಿರತ್ನ ಅವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಹಿನ್ನೆಲೆ ಅವರ ಅಳಿಯನೂ ಆಗಿರುವ ದಾವಣಗೆರೆ ಎಸ್​ಪಿ ಸಿಬಿ ರಿಷ್ಯಂತ್ ಸೇರಿ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಬೆಂಗಳೂರಿನ ವೈಟ್​​ಫೀಲ್ಡ್​​​ ಡಿಸಿಪಿ ಗಿರೀಶ್​ ಮತ್ತು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಅವರನ್ನು​​ ವರ್ಗಾವಣೆ ಮಾಡಲಾಗಿದೆ. ಅದರಂತೆ ವೈಟ್​​ಫೀಲ್ಡ್ ವಿಭಾಗಕ್ಕೆ​​​ ಧರ್ಮೇಂದ್ರ ಕುಮಾರ್ ಮೀನಾ ಅವರನ್ನು ನೂತನ ಡಿಸಿಪಿ ಆಗಿ ನೇಮಕ ಮಾಡಲಾಗಿದೆ.

ಯಾವುದೇ ಅಧಿಕಾರಿಯ ಸಂಬಂಧಿಕರು ಚುನಾವಣೆಗೆ ಸ್ಪರ್ಧಿಸಿದರೆ ಅಂತಹ ಅಧಿಕಾರಿಯನ್ನ ಚುನಾವಣಾ ಸೇವೆಯಿಂದ ಬಿಡುಗಡೆ ಮಾಡಬೇಕು. ಇದು ಚುನಾವಣಾ ಆಯೋಗದ ನಿಯಮವಾಗಿದೆ. ಇದೇ ಕಾರಣಕ್ಕೆ ದಾವಣಗೆರೆ ಎಸ್​ಪಿ ಸಿಬಿ ರಿಷ್ಯಂತ್ ಅವರನ್ನು ಯಾವುದೇ ಹುದ್ದೆ ತೊರಿಸದೇ ವರ್ಗಾವಣೆ ಮಾಡಲಾಗಿದೆ. ಸಿಬಿ ರಿಷ್ಯಂತ್ ಅವರು ಸಚಿವ ಮುನಿರತ್ನ ಅವರ ದ್ವಿತೀಯ ಪುತ್ರಿಯ ಪತಿಯಾಗಿದ್ದಾರೆ. ರಿಷ್ಯಂತ್ ಅವರಿಂದ ತೆರವಾದ ಸ್ಥಾನಕ್ಕೆ ಕಲಬುರ್ಗಿ ಎಸ್ಪಿ ಡಾ. ಅರುಣ್ ಕೆ ಅವರನ್ನು ನಿಯೋಜಿಸಲಾಗಿದೆ.

Join Whatsapp
Exit mobile version