ಜೈಲಿನಲ್ಲಿ ಕೊಲೆ ಆರೋಪಿಯ ಭರ್ಜರಿ ಹುಟ್ಟಹಬ್ಬ ಆಚರಣೆ: ವ್ಯಾಪಕ ಆಕ್ರೋಶ

Prasthutha|

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ಭರ್ಜರಿ ಬರ್ತ್ಡೇ ಸೆಲೆಬ್ರೇಶನ್ ಮಾಡಿಕೊಂಡಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -


ಹೊರಗಿನಿಂದ ಬಂದವರು ಜೈಲಿನಲ್ಲಿ ಕೊಲೆಗಾರನಿಗೆ ಹೂವಿನ ಹಾರ ಹಾಕಿ ಕೇಕ್ ಕತ್ತರಿಸಿ ಭರ್ಜರಿಯಾಗಿ ಹುಟ್ಟುಹಬ್ಬ ಆಚರಿಸಿದ್ದಾರೆ.


ವಿಚಾರಣಾಧೀನ ಖೈದಿಯಾಗಿ ಜೈಲಿನಲ್ಲಿರುವ ಉಮೇಶ್, ಅದ್ಧೂರಿಯಾಗಿ ಬರ್ತ್ಡೇ ಆಚರಿಸಿಕೊಂಡಿದ್ದಾನೆ. ಕೇಕ್ ತಿಂದು ಫೋಟೋ ಕ್ಲಿಕ್ಕಿಸಿಕೊಂಡಿದ್ದಾನೆ.

- Advertisement -


ಪರಪ್ಪನ ಅಗ್ರಹಾರ ಜೈಲಿನಲ್ಲಿ ಆಗುತ್ತಿರುವ ಅಕ್ರಮಗಳಿಗೆ ಇನ್ನೂ ಕಡಿವಾಣ ಹಾಕಲಾಗಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Whatsapp