ಬೆಳ್ತಂಗಡಿ: ನಿಶ್ಚಿತಾರ್ಥವಾಗಬೇಕಿದ್ದ ಯುವಕನ ಕೊಲೆ ಪ್ರಕರಣ| 6ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Prasthutha|

ಮಂಗಳೂರು: ನಿಶ್ಚಿತಾರ್ಥ ಆಗಬೇಕಿದ್ದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.

- Advertisement -

2017ರ ಎಪ್ರಿಲ್ 30 ರಂದು ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಪಟ್ರಮೆ ಎಂಬಲ್ಲಿ ನಿಶ್ಚಿತಾರ್ಥವಾಗಬೇಕಿದ್ದ ಸುರೇಶ್ ನಾಯ್ಕ ಎಂಬ ಯುವಕನನ್ನು ಆರು ಜನರು ಸೇರಿ ಬರ್ಬರವಾಗಿ ಹತ್ಯೆಗೈದಿದ್ದರು.

ನಿಶ್ಚಿತಾರ್ಥವಾಗಬೇಕಿದ್ದ ಯುವತಿಯನ್ನು ಏಕಮುಖವಾಗಿ ಪ್ರೀತಿಸುತ್ತಿದ್ದ ಆರೋಪಿ ಆನಂದ ನಾಯ್ಕ ಐದು ಜನ ಸ್ನೇಹಿತರಾದ ವಿನಯ್,ಪ್ರವೀಣ್ ನಾಯ್ಕ, ಲೋಕೇಶ, ಪ್ರಕಾಶ್, ನಾಗರಾಜ ಮೂಲ್ಯ ಜೊತೆ ಸೇರಿ ಸುರೇಶ್ ನಾಯ್ಕನನ್ನು ಅಪಹರಿಸಿ ಕೊಲೆಗೈದು ಬೆಂಕಿಯಲ್ಲಿ ಸುಟ್ಟಿದ್ದರು.

- Advertisement -

ಧರ್ಮಸ್ಥಳ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು.

Join Whatsapp