Home ಟಾಪ್ ಸುದ್ದಿಗಳು ಮನೆಗೆ ನುಗ್ಗಿ ಕಾಂಗ್ರೆಸ್ ನಾಯಕನ ಕೊಲೆ: ಪತ್ನಿಯ ಸ್ಥಿತಿ ಗಂಭೀರ !

ಮನೆಗೆ ನುಗ್ಗಿ ಕಾಂಗ್ರೆಸ್ ನಾಯಕನ ಕೊಲೆ: ಪತ್ನಿಯ ಸ್ಥಿತಿ ಗಂಭೀರ !

ರಾಮಗಢ​: ಮನೆಗೆ ನುಗ್ಗಿ ಕಾಂಗ್ರೆಸ್​​ ನಾಯಕ ಕಮಲೇಶ್ ನಾರಾಯಣ್ ಶರ್ಮಾ(60) ಅವರನ್ನು ಕೊಲೆ ಮಾಡಿ ಪತ್ನಿ ಮೇಲೆ ತೀವ್ರವಾಗಿ ಹಲ್ಲೆ ನಡೆಸಿರುವ ಘಟನೆ ಜಾರ್ಖಂಡ್‌ ನ ರಾಮಗಢ ಜಿಲ್ಲೆಯಲ್ಲಿ ನಡೆದಿದೆ.

ಶುಕ್ರವಾರ ರಾತ್ರಿ ಅಪರಿಚಿತರು ಭುರ್ಕುಂದ ಪೊಲೀಸ್ ಚೌಕಿಯ ಸೆಂಟ್ರಲ್ ಸೌಂಡಾ ಕಾಲೋನಿಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಮಲೇಶ್ ನಾರಾಯಣ್ ಶರ್ಮಾ ಅವರ ನಿವಾಸಕ್ಕೆ ಕಿಟಕಿಯ ಮೂಲಕ ಪ್ರವೇಶಿಸಿ ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ ಮಾಡಿದ್ದಾರೆ ಮತ್ತು ಕಮಲೇಶ್​ ಪತ್ನಿ ಚಂಚಲಾ ಶರ್ಮಾ ಅವರನ್ನು ತೀವ್ರವಾಗಿ ಗಾಯಗೊಳಿಸಿದ್ದಾರೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣದ ಕುರಿತು ತನಿಖೆ ಚುರುಕುಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಭಾತ್ ಕುಮಾರ್ ಹೇಳಿದ್ದಾರೆ.

Join Whatsapp
Exit mobile version