Home Uncategorized ಮಡಿಕೇರಿ : ಹಳೆಯ ದ್ವೇಷದ ಹಿನ್ನೆಲೆ ಸ್ನೇಹಿತನ ಕೊಲೆ !

ಮಡಿಕೇರಿ : ಹಳೆಯ ದ್ವೇಷದ ಹಿನ್ನೆಲೆ ಸ್ನೇಹಿತನ ಕೊಲೆ !

ಕೊಣನೂರು:  ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಸ್ನೇಹಿತನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹಾಸನ ಜಿಲ್ಲೆಯ ಕೊಣನೂರಿನಲ್ಲಿ ನಡೆದಿದೆ. ಹರೀಶ್ ಕೊಲೆಯಾದ ವ್ಯಕ್ತಿಯಾಗಿದ್ದು, ಸ್ನೇಹಿತ ಲೋಕೇಶ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕೊಲೆಯಾದ  ಹರೀಶ್ ಮೂಲತಃ ಕೊಡಗು ಜಿಲ್ಲೆಯ ಕುಶಲನಗರದವನು ಎಂದು ತಿಳಿದು ಬಂದಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದೆ.

ಸ್ನೇಹಿತರಾದ ಇಬ್ಬರು ಒಟ್ಟಿಗೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರಿನ ಖಾಸಗಿ ಲಾಡ್ಜ್ ಒಂದರಲ್ಲಿ ಮದ್ಯಪಾನ ಮಾಡಿದ್ದಾರೆ. ಕಂಠಪೂರ್ತಿ ಕುಡಿದಿದ್ದ ಹರೀಶ್ ಬಳಿಕ ಶೌಚಾಲಯಕ್ಕೆ ಹೋದ ವೇಳೆ ಆತನನ್ನು ಮಾರಕಾಸ್ತ್ರಗಳಿಂದ ಲೋಕೇಶ್ ಬರ್ಬರವಾಗಿ ಕೊಲೆ ಮಾಡಿದ್ದು ನಂತರ ಸ್ವತಃ ತಾನೇ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.

ಆರೋಪಿಯ ಸಂಬಂಧಿಕಳೊಬ್ಬಳ ಜೊತೆ ಕೊಲೆಯಾದ ಹರೀಶ್ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ. ಇದು ಆರೋಪಿಗೆ ಗೊತ್ತಾದಾಗ ಹಿಂದೆ ಒಂದೆರಡು ಬಾರಿ ಸಣ್ಣಪುಟ್ಟ ಗಲಾಟೆ ನಡೆದು ಊರಿನ ಗ್ರಾಮಸ್ಥರು ಬುದ್ಧಿ ಹೇಳಿ ಕಳುಹಿಸಿದ್ದರು. ಆದರೆ ತನ್ನ ಚಾಳಿಯನ್ನು ಬಿಡದ  ಹರೀಶ್ ಅನೈತಿಕ ಸಂಬಂಧ ಮುಂದುವರಿಸಿದ್ದಾನೆ ಎನ್ನಲಾಗಿದೆ. ಇದೇ ದ್ವೇಷದಿಂದ ಹರೀಶ್ ನನ್ನು ಲೋಕೇಶ್ ಕೊಲೆ ಮಾಡಿದ್ದಾನೆ.

ಇನ್ನು ಸ್ಥಳಕ್ಕೆ ಕೊಣನೂರು ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹಾಸನದ ಹಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮುಂದುವರಿಸಿದ್ದಾರೆ.

Join Whatsapp
Exit mobile version