ಸಂತೋಷ್ ಪತ್ನಿಗೆ ಸರ್ಕಾರಿ ಕೆಲಸ ಕೊಡಿಸಲು ಸಿಎಂ ಜೊತೆ ಚರ್ಚೆ: ಮುರುಗೇಶ್ ನಿರಾಣಿ

Prasthutha|

- Advertisement -

ಬೆಳಗಾವಿ: ಸಂತೋಷ್ ಪತ್ನಿಗೆ ಸರ್ಕಾರಿ ಕೆಲಸ ಕೊಡಿಸಲು ಸಿಎಂ ಬೊಮ್ಮಾಯಿ ಜೊತೆ ಚರ್ಚೆ ನಡೆಸಲಾಗುವುದು ಎಂದು ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.

ಸಮರ್ಥ ಕಾಲೋನಿಯಲ್ಲಿರುವ ಸಂತೋಷ್ ಮನೆಗೆ ಭೇಟಿ ನೀಡಿದ ಅವರು ಕುಟುಂಬಸ್ಥರು ಮತ್ತು ಸಂತೋಷ್ ಪತ್ನಿ ಜಯಶ್ರೀ ಅವರಿಗೆ ಸಾಂತ್ವನ ಹೇಳಿದರು.

- Advertisement -

ಬಳಿಕ ಮಾತನಾಡಿದ ಅವರು, ಸರ್ಕಾರದಿಂದ ಸಾಧ್ಯವಾದಷ್ಟು ಸಹಾಯವನ್ನು ಕುಟುಂಬಕ್ಕೆ ನೀಡಲಾಗುವುದು. ಅಲ್ಲದೆ, ಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ನಾನು ವಹಿಸಿಕೊಳ್ಳುತ್ತೇನೆ. ಸಂತೋಷ್ ಪತ್ನಿಗೆ ಸರ್ಕಾರಿ ನೌಕರಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

Join Whatsapp