ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಮುಂದೆ ಭಾರೀ ಬೆಲೆ ತೆರಬೇಕಾಗುತ್ತದೆ: ಮುರುಘಾ ಶರಣರ ಎಚ್ಚರಿಕೆ

Prasthutha|

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡದಂತೆ ಮಠಾಧೀಶರು ಸಿಎಂ ಪರವಾಗಿ ಬ್ಯಾಟ್ ಬೀಸಿದ್ದಾರೆ.

- Advertisement -

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸುದ್ದಿಗೋಷ್ಠಿಯಲ್ಲಿಂದು, ರಾಜ್ಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಯಾದ ಬಳಿಕ  ಯಡಿಯೂರಪ್ಪನವರು ಅಪಾರ ಕೊಡುಗೆ ನೀಡಿದ್ದಾರೆ. ಇಂತಹ ನಾಯಕನನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದರೆ ಮುಂದೆ ಭಾರೀ ಬೆಲೆ ತೆರಬೇಕಾಗುತ್ತದೆ ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ.

ದಕ್ಷಿಣ ಭಾರತದಲ್ಲಿ ಬಿಜೆಪಿ ಸರ್ಕಾರವನ್ನು ರಕ್ಷಿಸಿದ ಹೆಗ್ಗಳಿಕೆಗೆ ಸಿಎಂ ಯಡಿಯೂರಪ್ಪ ಪಾತ್ರರಾಗಿದ್ದಾರೆ. ಇಂತಹ ಯಡಿಯೂರಪ್ಪ ನೇರ ಹಾಗೂ ಧೀರ ನಡೆಗೆ ಹೆಸರಾದವರು. ತಳಮಟ್ಟದಿಂದ ರಾಜಕೀಯ ನಡೆಯ ಹಿನ್ನೆಲೆಯಿಂದ ಯಡಿಯೂರಪ್ಪ ಬಂದಿದ್ದಾರೆ. ಪಕ್ಷಕ್ಕೆ ಅಪಾರವಾಗಿ ಶ್ರಮಿಸಿದ್ದಾರೆ. ಇವರನ್ನು ಸಿಎಂ ಸ್ಥಾನದಿಂದ ಇಳಿಸುವುದು, ಅವರ ಬಗ್ಗೆ ಅಲಕ್ಷ್ಯ ಮಾಡುವುದು ಸರಿಯಲ್ಲ ಎಂದು ಎಚ್ಚರಿಸಿದ್ದಾರೆ.

Join Whatsapp