Home ಟಾಪ್ ಸುದ್ದಿಗಳು ಜೈ ಶ್ರೀರಾಮ್ ಹೇಳಲಿಲ್ಲ ಎಂದು ಮುಸ್ಲಿಮ್ ಬಾಲಕನಿಗೆ ಸಂಘಪರಿವಾರದ ಕಾರ್ಯಕರ್ತರಿಂದ ಹಲ್ಲೆ

ಜೈ ಶ್ರೀರಾಮ್ ಹೇಳಲಿಲ್ಲ ಎಂದು ಮುಸ್ಲಿಮ್ ಬಾಲಕನಿಗೆ ಸಂಘಪರಿವಾರದ ಕಾರ್ಯಕರ್ತರಿಂದ ಹಲ್ಲೆ

ಖಂಡ್ವಾ: ಜೈ ಶ್ರೀರಾಮ್ ಘೋಷಣೆ ಹೇಳಲಿಲ್ಲ ಎಂಬ ಕಾರಣಕ್ಕೆ 10 ವರ್ಷದ ಮುಸ್ಲಿಂ ಬಾಲಕನಿಗೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.


ಈ ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 295ಎ (ಧಾರ್ಮಿಕ ಭಾವನೆಗೆ ಧಕ್ಕೆ) ಮತ್ತು 323 (ಹಲ್ಲೆ ಯತ್ನ) ಪ್ರಕರಣಗಳನ್ನು ದಾಖಲಿಸಿರುವುದಾಗಿ ಪೊಲೀಸ್ ಉಪ ವರಿಷ್ಠಾಧಿಕಾರಿ ಅನಿಲ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.


ಬುಧವಾರ ಸಂಜೆ ಐದನೇ ತರಗತಿ ವಿದ್ಯಾರ್ಥಿ ಟ್ಯೂಷನ್’ಗೆ ಹೋಗುವಾಗ ಈ ಘಟನೆ ನಡೆದಿದೆ. ಈ ಪ್ರಕರಣ ಸಂಬಂಧ ಬಾಲಕನ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

Join Whatsapp
Exit mobile version