ಮುಸ್ಲಿಂ ನಾಯಕರಿಗೆ ಕಿರುಕುಳ ನೀಡುವ ಪ್ರಯತ್ನ: ಜಮೀರ್ ಅಹ್ಮದ್ ಖಾನ್

Prasthutha|

ಬೆಂಗಳೂರು: ದೇಶದ ವಿವಿಧ ರಾಜ್ಯಗಳ ಪ್ರಬಲ ಮುಸ್ಲಿಂ ನಾಯಕರ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಅವರಿಗೆ ಕಿರುಕುಳ ನೀಡುವ ಪ್ರಯತ್ನ ನಡೆಯುತ್ತಿದೆ.ಇಂತಹ ಷಡ್ಯಂತ್ರದ ಭಾಗವಾಗಿ ನನ್ನ ಮೇಲೂ ಹಲವು ರೀತಿ ದಾಳಿಗಳಾಗುತ್ತಿವೆ. ಆದರೆ ಇದ್ಯಾವುದಕ್ಕೂ ನಾನು ಹೆದರುವುದಿಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಟ್ವೀಟ್ ಮಾಡಿದ್ದಾರೆ.  

- Advertisement -

ನನ್ನ ಆಸ್ತಿಯೆಂದರೆ ನನ್ನ ಜನ. ನಾನು ರಾಜಕೀಯ ಜೀವನದಲ್ಲಿರುವವರೆಗೆ ನನ್ನ ಜನ ತಲೆತಗ್ಗಿಸುವಂತ ಯಾವ ಕೆಲಸವನ್ನೂ ಮಾಡುವುದಿಲ್ಲ. ನನ್ನ ಆಸ್ತಿಯೂ ಅವರೇ. ಇ.ಡಿ ದಾಳಿಯಿಂದ ಹಲವರ ಅನುಮಾನಗಳು ಪರಿಹಾರವಾದದ್ದೇ ನನಗೆ ಖುಷಿಯ ವಿಚಾರ. ನಾನು ಮನೆಯನ್ನು ಕಟ್ಟಿಸಿದ್ದೇ ದೊಡ್ಡ ಅಪರಾಧವೆಂಬಂತೆ ಬಿಂಬಿಸಲಾಗುತ್ತಿದೆ. ಈ ಕಾರಣಕ್ಕಾಗಿ ನನ್ನ ಮೇಲೆ ಇ.ಡಿ. ದಾಳಿಯಾಯಿತು. ಇ.ಡಿ. ಯವರು ಯಾವ ನಿರೀಕ್ಷೆಯಿಂದ ನನ್ನ ಮೇಲೆ ದಾಳಿ ಮಾಡಿದ್ದರೋ ಆ ಎಲ್ಲಾ ನಿರೀಕ್ಷೆಗಳು ಹುಸಿಯಾಗಿವೆ ಎಂದು ಹೇಳಿದ್ದಾರೆ.

Join Whatsapp