ಬಿಜೆಪಿ ಮುಖಂಡನ ಮಗನ ಕಾರಿಗೆ ಕಲ್ಲು ತೂರಾಟ; ಶಿವಮೊಗ್ಗದಲ್ಲಿ ಬಿಗುವಿನ ಪರಿಸ್ಥಿತಿ

Prasthutha|

ಶಿವಮೊಗ್ಗ: ಶುಕ್ರವಾರ ತಡರಾತ್ರಿ ನಗರದ ಸುಳಿಬೈಲು ಬೈಪಾಸ್ ರಸ್ತೆಯಲ್ಲಿ ಬಿಜೆಪಿ ಮುಖಂಡ ಎಂ.ಬಿ. ಭಾನುಪ್ರಕಾಶ್ ಅವರ ಮಗನ ಕಾರಿಗೆ ದುಷ್ಕರ್ಮಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿದೆ. ಪರಿಣಾಮ ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸುವ ಸಾಧ್ಯತೆಯಿದೆ.

- Advertisement -

ಆರು ಜನರ ದುಷ್ಕರ್ಮಿಗಳ ತಂಡ ಕಾರನ್ನು ತಡೆದು ನಿಲ್ಲಿಸಿ ವಾಹನಕ್ಕೆ ಕಲ್ಲು ತೂರಾಟ ನಡೆಸಿದೆ ಎಂದು ತಿಳಿದು ಬಂದಿದೆ. ಘಟನೆಯ ಬಳಿಕ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

ಘಟನೆಯಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದ್ದು, ಎಸ್ಪಿ ಕಛೇರಿಗೆ ಮುತ್ತಿಗೆ ಹಾಕಿದ ಬಿಜೆಪಿ ನಾಯಕರು ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.

Join Whatsapp