ಮುಸ್ಲಿಮರಿಗೆ ಪ್ರತ್ಯೇಕ ಕಾಲೇಜಿನ ಅಗತ್ಯವಿಲ್ಲ: ಸಿಎಂ ಇಬ್ರಾಹಿಂ

Prasthutha|

ಕಲಬುರಗಿ: ಮುಸ್ಲಿಮರಿಗೆ ಪ್ರತ್ಯೇಕ ಕಾಲೇಜು ವಿಚಾರದ ಮೂಲಕ ಬಿಜೆಪಿ ವಿನಾಕಾರಣ ವಿವಾದ ಹುಟ್ಟು ಹಾಕುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಂ ವಿದ್ಯಾರ್ಥಿಗಳಿಗೆ ವಕ್ಫ್ ಬೋರ್ಡ್ ನಿಂದ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡುವುದು ತಪ್ಪು. ಪ್ರತ್ಯೇಕ ಮುಸ್ಲಿಂ ಕಾಲೇಜಿನ ಅವಶ್ಯಕತೆ ಇಲ್ಲ. ಕೇವಲ ಒಂದೇ ಧರ್ಮದ ವಿದ್ಯಾರ್ಥಿಗಳಿಗೆ ಕಾಲೇಜು ಸ್ಥಾಪನೆ ಎಂದರೆ ನಾನೇ ಮೊದಲು ಹೋರಾಟಕ್ಕೆ ಇಳಿಯುತ್ತೇನೆ ಎಂದು ಹೇಳಿದರು.


ನಾನು ಹಿಂದೆ ಮಠದಲ್ಲಿ ಓದಿದ್ದೇನೆ. ಅಲ್ಲಿ ಯಾವುದೇ ರೀತಿಯ ಭೇದ ಬಾವ ಇರಲಿಲ್ಲ. ಆದರೆ ಮುಸ್ಲಿಮರಿಗೆ ಪ್ರತ್ಯೇಕ ಕಾಲೇಜು ವಿಚಾರದ ಮೂಲಕ ಬಿಜೆಪಿಯವರು ವಿನಾಕಾರಣ ವಿವಾದ ಹುಟ್ಟು ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.

Join Whatsapp