‘ಮುಸ್ಲಿಮರು ಬಿಜೆಪಿಗೆ ಮತ ಹಾಕುವುದಿಲ್ಲ, ಮಸೀದಿಯ ಧ್ವನಿವರ್ಧಕದ ವಿರುದ್ಧ ಕ್ರಮ ಕೈಗೊಳ್ಳಿ’: ಪ್ರಮೋದ್ ಮುತಾಲಿಕ್

Prasthutha|

ಬೆಂಗಳೂರು: ಪ್ರತಿ ದಿನ ಮುಂಜಾನೆ 5 ಗಂಟೆಯಿಂದಲೇ ಮಸೀದಿಗಳಲ್ಲಿ ಅಳವಡಿಸಲಾಗಿರುವ ಧ್ವನಿವರ್ಧಕಗಳ ಗದ್ದಲ ಸೃಷ್ಟಿಸುತ್ತಿದ್ದು, ಅವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ. ಮುಸ್ಲಿಮರು ಎಂದಿಗೂ ಬಿಜೆಪಿಗೆ ಮತ ಹಾಕುವುದಿಲ್ಲ. ಆದ್ದರಿಂದ ಅವರನ್ನು ಓಲೈಸುವ ಅಗತ್ಯವಿಲ್ಲ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

- Advertisement -

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೀದಿಗಳಲ್ಲಿ ಅಳವಡಿಸಲಾಗಿರುವ ಧ್ವನಿವರ್ಧಕಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಮೇ 9 ರಂದು ಶ್ರೀರಾಮ ಸೇನೆ ವತಿಯಿಂದ ಬೆಳಿಗ್ಗೆ 5 ಗಂಟೆಯಿಂದ ಆಝಾನ್ ವಿರುದ್ಧವಾಗಿ ಹನುಮಾನ್ ಚಾಲೀಸ, ಸುಪ್ರಭಾತ ಮತ್ತು ಭಕ್ತಿಗೀತೆಗಳನ್ನು ಪಠಿಸಲಿದೆ ಎಂದು ಅವರು ಎಚ್ಚರಿಸಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಮಸೀದಿಗಳಲ್ಲಿ ಅಳವಡಿಸಲಾಗಿರುವ ಧ್ವನಿವರ್ಧಕಗಳ ವಿರುದ್ಧ ಕಠಿಣ ನಿಲುವು ತಳೆದಿದ್ದಾರೆ ಮತ್ತು ಸುಪ್ರೀಂ ಕೋರ್ಟ್ ಆದೇಶಗಳನ್ನು ಜಾರಿಗೆ ತಂದಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತರ ರಾಜ್ಯದ ಮುಖ್ಯಮಂತ್ರಿಯಿಂದ ಸೂಚನೆ ಪಡೆದು ಮುಸ್ಲಿಮರು ಬಿಜೆಪಿಗೆ ಮತ ಹಾಕದ ಕಾರಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

- Advertisement -

ನಾವು ಮಸೀದಿಗಳಲ್ಲಿ ಪ್ರಾರ್ಥನೆಗಳನ್ನು ವಿರೋಧಿಸುವುದಿಲ್ಲ, ಆದರೆ ಧ್ವನಿವರ್ಧಕಗಳಲ್ಲಿ ಅಜಾನ್ ರೂಪದಲ್ಲಿ ಬರುವ ಶಬ್ದವನ್ನು ವಿರೋಧಿಸುತ್ತೇವೆ. ಇದು ಜನರ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ವಿದ್ಯಾರ್ಥಿಗಳು, ಸರ್ಕಾರಿ ಕಚೇರಿ ಸಿಬ್ಬಂದಿ ಮತ್ತು ಆಸ್ಪತ್ರೆಗಳಲ್ಲಿನ ರೋಗಿಗಳು ಆಝಾನ್ ಗದ್ದಲದಿಂದ ಸಮಸ್ಯೆಕ್ಕೀಡಾಗಿದ್ದಾರೆ. ಆದ್ದರಿಂದ ಇತರರಿಗೆ ತೊಂದರೆ ನೀಡುವ ಇಸ್ಲಾಂ ಅನ್ನು ಶಾಂತಿಯ ಧರ್ಮ ಎಂದು ಕರೆಯಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಶ್ರೀರಾಮ ಸೇನೆ ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ದೇವಾಲಯಗಳ ಆಡಳಿತ ಮಂಡಳಿಗಳೊಂದಿಗೆ ಮಾತುಕತೆ ನಡೆಸಿದ್ದು, ಮೇ 9 ರಿಂದ ಬೆಳಿಗ್ಗೆ 5 ಗಂಟೆಗೆ ಆಝಾನ್ ಗೆ ವಿರುದ್ಧವಾಗಿ ಹನುಮಾನ್ ಚಾಲೀಸಾ, ಸುಪ್ರಭಾತ ಮತ್ತು ಭಕ್ತಿಗೀತೆಗಳನ್ನು ಪಠಿಸಲು 1,000 ಕ್ಕೂ ಹೆಚ್ಚು ದೇವಾಲಯಗಳು ಮುಂದೆ ಬಂದಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

Join Whatsapp