ಬೆಳಗಾವಿ ಲೋಕಸಭೆ ಉಪಚುನಾವಣೆ | ಬಿಜೆಪಿ ಟಿಕೆಟ್ ಪಡೆಯುವ ಭರವಸೆ : ಪ್ರಮೋದ್ ಮುತಾಲಿಕ್

Prasthutha|

ಬಾಗಲಕೋಟೆ : ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಗಾಗಿ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದೇನೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.  “ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ನಾನು ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಈ ಬಗ್ಗೆ ಪಕ್ಷದ ವರಿಷ್ಠರೂ ಸಕಾರಾತ್ಮಕವಾಗಿ ಸ್ಪಂದಿಸಿರುವುದರಿಂದ ನನಗೆ ಟಿಕೆಟ್ ಸಿಗುವ ಭರವಸೆ ಇದೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

- Advertisement -

ಚುನಾವಣೆಯಲ್ಲಿ ಗೆದ್ದು ಮೂರು ವರ್ಷದ ಅವಧಿಯಲ್ಲಿಯೂ ಹಿಂದುತ್ವಕ್ಕಾಗಿ ಕೆಲಸ ಮಾಡುತ್ತೇನೆ. ಒಂದು ವೇಳೆ ನನಗೆ ಟಿಕೆಟ್ ಸಿಗದಿದ್ದರೆ ಸುರೇಶ್ ಅಂಗಡಿ ಕುಟುಂಬಕ್ಕೆ ಅಥವಾ ಜಗದೀಶ ಶೆಟ್ಟರ್ ಕುಟುಂಬಕ್ಕೋ ಟಿಕೆಟ್ ಕೊಟ್ಟರೆ ಅವರ ಪರವಾಗಿ ಪ್ರಚಾರ ಮಾಡಲು ತಾನು ಸಿದ್ಧ ಎಂದು ಅವರು ಹೇಳಿದ್ದಾರೆ.

Join Whatsapp