ಸಾಹಿತಿಗಳ ಪರವಾಗಿ ಹೋರಾಟ ಮಾಡುವ ಎಲ್ಲಾ ಕನ್ನಡ ಮನಸ್ಸುಗಳಿಗೆ ನನ್ನ ಪೂರ್ಣ ಬೆಂಬಲ: ಎಚ್ ಸಿ ಮಹದೇವಪ್ಪ

Prasthutha|

ಬೆಂಗಳೂರು: ಶೂದ್ರ ಸಮುದಾಯಗಳ ವೈಚಾರಿಕ ಪ್ರಜ್ಞೆಯನ್ನು ಗಟ್ಟಿಗೊಳಿಸಿದ ಕುವೆಂಪು ಅವರನ್ನು ಹೀಯಾಳಿಸುವ ಕೆಲಸ ಮಾಡುತ್ತಿರುವ ಬಿಜೆಪಿಗರು ಇದೀಗ ಸಾಹಿತಿ ದೇವನೂರು ಮಹಾದೇವ ಅವರ ಮೇಲೆಯೂ ವಿಷ ಕಾರುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಎಚ್ ಸಿ ಮಹದೇವಪ್ಪ ಹೇಳಿದ್ದಾರೆ.

- Advertisement -

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಹದೇವಪ್ಪ, ಮನುವಾದಿಗಳ ಈ ಪ್ರಯತ್ನಕ್ಕೆ ಸ್ವಾಮೀಜಿಗಳ ಆದಿಯಾಗಿ ಬಹಳಷ್ಟು ಸಂಘಟನೆಗಳು ಪ್ರತಿರೋಧ ವ್ಯಕ್ತಪಡಿಸುತ್ತಿದ್ದು ಕನ್ನಡ ನಾಡಿನ ವೈಚಾರಿಕ ಪ್ರಜ್ಞೆಯಾದ ಸಾಹಿತಿಗಳ ಪರವಾಗಿ ಹೋರಾಟ ಮಾಡುವ ಎಲ್ಲಾ ಜನರ ಮತ್ತು ಕನ್ನಡ ಮನಸ್ಸುಗಳಿಗೆ ನನ್ನ ಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾರೆ.

ಕೆಳವರ್ಗಗಗಳ ಪರವಾದ ಮತ್ತು ಎಲ್ಲ ಮನುಷ್ಯರೂ ಸಮಾನರೆಂಬ ತಿಳುವಳಿಕೆಯನ್ನು ನೀಡಿದ ಕುವೆಂಪು ಮತ್ತು ದೇವನೂರು ಮಹಾದೇವ ಅಂತವರನ್ನು ಅಸಹನೆಯಿಂದ ಕಾಣುವಂತಹ ನೀಚ ಪ್ರವೃತ್ತಿಯನ್ನು ಮನುವಾದಿಗಳು ಹುಟ್ಟು ಹಾಕಲು ಯತ್ನಿಸುತ್ತಿರುವುದು ಖಂಡನಾರ್ಹವಾದ ಸಂಗತಿಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

Join Whatsapp