ಧರ್ಮದ ವಿಚಾರದಲ್ಲಿಯೇ ನನ್ನ ಗಂಡನ ಕೊಲೆ: ಯುವ ಬ್ರಿಗೇಡ್ ಸಂಚಾಲಕ ವೇಣುಗೋಪಾಲ್ ಪತ್ನಿ ಆರೋಪ

Prasthutha|

ಮೈಸೂರು: ‘ನನ್ನ ಗಂಡನ ಕೊಲೆ ವೈಯಕ್ತಿಕ ಕಾರಣದಿಂದ ನಡೆದಿಲ್ಲ. ಧರ್ಮದ ವಿಚಾರದಲ್ಲಿಯೇ ಆಗಿದೆ’ ಎಂದು ತಿ.ನರಸೀಪುರದಲ್ಲಿ ಕೊಲೆಯಾದ ಯುವ ಬ್ರಿಗೇಡ್ ಸಂಚಾಲಕ ವೇಣುಗೋಪಾಲ್ ಪತ್ನಿ ಪೂರ್ಣಿಮಾ ಆರೋಪಿಸಿದ್ದಾರೆ.

- Advertisement -


ಈ ಕುರಿತು ಮಾತನಾಡಿದ ವೇಣುಗೋಪಾಲ್ ಪತ್ನಿ, ನಾನು, ವೇಣುಗೋಪಾಲ್ ಪ್ರೀತಿಸಿ ಮದುವೆ ಆಗಿದ್ದೆವು. ನಾವು ಮೂರು ವರ್ಷಗಳಿಂದ ಹನುಮ ಜಯಂತಿ ಆಚರಣೆ ಮಾಡುತ್ತಿದ್ದೇವೆ. ನನ್ನ ಗಂಡನ ಬಳಿ ಹಣ ಇಲ್ಲ, ಅಧಿಕಾರ ಇಲ್ಲ. ಆದರೂ ಅದ್ಧೂರಿಯಾಗಿ ಹನುಮ ಜಯಂತಿ ಆಚರಣೆ ಮಾಡಿದ್ದೆವು. ಅದನ್ನು ಸಹಿಸದೆ ಕೊಲೆ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.


‘ನನ್ನ ಗಂಡನ ಸಾವಿಗೆ ನ್ಯಾಯ ಬೇಕು. ಇಲ್ಲವಾದರೆ ನಾನು, ನನ್ನ ಮಗಳು ಕೂಡ ಅವರಂತೆಯೇ ಸಾಯುತ್ತೇವೆ. ಮುಂದಿನ ವರ್ಷ ನಾನೂ ಹನುಮ ಜಯಂತಿ ಮಾಡುತ್ತೇನೆ. ಆಗ ನನ್ನನ್ನೂ ಸಾಯಿಸುತ್ತಾರೆ. ಅದರ ಮುಂದಿನ ವರ್ಷ ನನ್ನ ಮಗಳು ಹನುಮ ಜಯಂತಿ ಮಾಡಿದರೆ ಆಕೆಯನ್ನೂ ಸಾಯಿಸುತ್ತಾರೆ. ಅಲ್ಲಿಗೆ ಹಿಂದೂ ಧರ್ಮವೂ ಸಾಯುತ್ತದೆ. ನನ್ನ ಗಂಡನ ಏಳಿಗೆ ಸಹಿಸದೆ ಕೊಲೆ ಮಾಡಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು’ ಎಂದು ಒತ್ತಾಯಿಸಿದರು.



Join Whatsapp