Home ಟಾಪ್ ಸುದ್ದಿಗಳು ನನ್ನ ಸ್ಥಾನ ಆಟಕ್ಕುಂಟು, ಲೆಕ್ಕಕ್ಕಿಲ್ಲ : ರೇಣುಕಾಚಾರ್ಯ

ನನ್ನ ಸ್ಥಾನ ಆಟಕ್ಕುಂಟು, ಲೆಕ್ಕಕ್ಕಿಲ್ಲ : ರೇಣುಕಾಚಾರ್ಯ

ಬೆಂಗಳೂರು : ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನ ಎನ್ನುವುದು ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ. ಒಂತರಾ ಬಂದ ಪುಟ್ಟ, ಹೋದ ಪುಟ್ಟ ತರ. ನನಗೆ ಇದರ ಅವಶ್ಯಕತೆನೇ ಇರಲಿಲ್ಲ” ಎನ್ನುವುದಾಗಿ ಬಿಜೆಪಿ ಸರ್ಕಾರದ ವಿರುದ್ದ ಎಂ.ಪಿ ರೇಣುಕಾಚಾರ್ಯ ಅಸಮಾಧಾನ ಹೊರಹಾಕಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಿಎಂ ರಾಜಕೀಯ ಕಾರ್ಯದರ್ಶಿ ಎನ್ನುವ ಹುದ್ದೆ ನೀಡಿ, ಅದಕ್ಕೊಂದು ಚೇಂಬರ್‌‌‌, ವಾಸಕ್ಕೊಂದು ಮನೆ ನೀಡಿದ್ದಾರೆ. ಅದನ್ನು ಬಿಟ್ಟರೆ ಬೇರೇನೂ ಕೊಟ್ಟಿಲ್ಲ. ಇಲ್ಲಿ ಮಾಡುವುದಕ್ಕೆ ಏನೂ ಕೆಲಸವಿಲ್ಲ” ಎಂದಿದ್ದಾರೆ.”ನನಗೆ ನೀಡಿರುವ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕಿಂತ, ನಾನು ಶಾಸಕನಾಗಿಯೇ ಇರುತ್ತೇನೆ” ಎಂದು ಹೇಳಿದ್ದಾರೆ.

ಯತ್ನಾಳ್‌ ರಾಜಕೀಯ ಬದಲಾವಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಸಿಎಂ ಬಸವರಾಜ ಬೊಮ್ಮಾಯಿ ಹೊರತುಪಡಿಸಿ ಉಳಿದೆಲ್ಲಾ ಸಂಪುಟ ಸಚಿವರ ಬದಲಾವಣೆ ನಿಶ್ಚಿತ. ಅಭಿವೃದ್ದಿಯ ದೃಷ್ಟಿಯಿಂದಲೂ ಇದು ಒಳ್ಳೆಯದು” ಎಂದು ತಿಳಿಸಿದ್ದಾರೆ.

Join Whatsapp
Exit mobile version