ರಾಜಕೀಯ ವಿರೋಧಿಗಳು ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ: ಸಿದ್ದರಾಮಯ್ಯ

Prasthutha|

ಬೆಂಗಳೂರು: ಸದನದಲ್ಲಿ ಸಿದ್ದರಾಮಯ್ಯ ಹಿಜಾಬ್ ಕುರಿತು ಮಾತನಾಡುವ ಸಂದರ್ಭ ಸ್ವಾಮೀಜಿಗಳು ತಲೆಗೆ ಬಟ್ಟೆ ಹಾಕುವುದಿಲ್ಲವೇ ಎಂದದನ್ನೇ ರಾದ್ದಾಂತ ಮಾಡಿರುವ ಬಿಜೆಪಿ ಹಾಗೂ ಮಾದ್ಯಮಗಳ ಬಗ್ಗೆ ಮಾಜಿ ಸಿಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಸರಣಿ ಟ್ವೀಟ್ ಮೂಲಕ ತನ್ನ ಮಾತಿಗೆ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ರಾಜಕೀಯ ವಿರೋಧಿಗಳು ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕೆಲವು ಮಾಧ್ಯಮಗಳು‌ ಕೂಡಾ ಸಾಥ್ ನೀಡಿರುವುದು‌ ವಿಷಾದನೀಯ ಬೆಳವಣಿಗೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ, ದೀರ್ಘಕಾಲದಿಂದ ನನಗೆ ಅವರ ಜೊತೆ ಹಾರ್ದಿಕ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ, ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ‌ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಹೇಳಿದ್ದಾರೆ.

- Advertisement -

ಮತ್ತೊಂದು ಟ್ವೀಟ್ ನಲ್ಲಿ, ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ನನ್ನ ಹೇಳಿಕೆಯನ್ನು ತಿರುಚಿರುವುದು ರಾಜ್ಯದ ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳಿಗೆ ಅರ್ಥವಾಗಿರುವ ಕಾರಣಕ್ಕಾಗಿಯೇ ಅವರು ಮೌನವಾಗಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು ಎಂದು ಸಿದ್ದರಾಮಯ್ಯ ಬರೆದಿದ್ದಾರೆ.

Join Whatsapp