ಮೈಸೂರು: ನೂರಾರು ಕೋಟಿ ಹಣ ಹೊಂದಿದ್ದ ಧೀರಜ್‌ ಸಾಹು ಬಂಧನಕ್ಕೆ ಬಿಜೆಪಿ ಪ್ರತಿಭಟನೆ

Prasthutha|

ಮೈಸೂರು: ನೂರಾರು ಕೋಟಿ ಅಕ್ರಮ ಹಣವಿಟ್ಟಿದ್ದ ಜಾರ್ಖಂಡ್‌ನ ಕಾಂಗ್ರೆಸ್‌ ಸಂಸದ ಧೀರಜ್‌ ‍ಪ್ರಸಾದ್‌ ಸಾಹು ಅವರನ್ನು ಕೂಡಲೇ ಬಂಧಿಸಬೇಕೆಂದು ಬಿಜೆಪಿ ನಗರ ಹಾಗೂ ಗ್ರಾಮಾಂತರ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಒತ್ತಾಯಿಸಿದ್ದಾರೆ.

- Advertisement -

ಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು ಕಾಂಗ್ರೆಸ್‌ ವಿರುದ್ಧ ಘೋಷಣೆ ಕೂಗಿದ್ದಾರೆ.

ಕಾಂಗ್ರೆಸ್‌ನ ಧೀರಜ್ ಸಾಹು ಮನೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ 300 ಕೋಟಿಗಿಂತಲೂ ಹೆಚ್ಚು ಹಣ ಪತ್ತೆಯಾಗಿದೆ. ಇಷ್ಟೊಂದು ಹಣ ಕಾಂಗ್ರೆಸ್‌ನ ಭ್ರಷ್ಟಾಚಾರವನ್ನು ತೋರಿಸುತ್ತದೆ. ಈ ಬಗ್ಗೆ ಆ ಪಕ್ಷದ ವರಿಷ್ಠರು ಇದುವರೆಗೂ ಮಾತನಾಡಿಲ್ಲ. ಅದು ಅವರಿಗೆ ಭ್ರಷ್ಟಾಚಾರದ ಬಗ್ಗೆ ಇರುವ ಕಾಳಜಿಯಾಗಿದೆ ಎಂದು ಮುಖಂಡ ಎಲ್‌.ನಾಗೇಂದ್ರ ಹೇಳಿದರು.

- Advertisement -

ಸ್ವಾತಂತ್ರ್ಯ ನಂತರ ಹೆಚ್ಚು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್‌ ಹಗರಣ ಸರಮಾಲೆಯನ್ನೇ ಹೊದ್ದಿದೆ. ‌ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ ಬಯಲಾಗುತ್ತಿದೆ ಎಂದರು

ಕರ್ನಾಟಕದಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರು ಸಂಸದರ ಮನೆಯಲ್ಲಿ ಸಿಕ್ಕಿಬಿದ್ದಿರುವ ಹಣದ ಮೂಲವನ್ನು ಸಾರ್ವಜನಿಕರಿಗೆ ತಿಳಿಸಲಿ ಎಂದು ಮುಖಂಡ ಎಸ್‌. ಮಹದೇವಯ್ಯ ಆಗ್ರಹಿಸಿದರು.

Join Whatsapp