Home ಟಾಪ್ ಸುದ್ದಿಗಳು ಮೈಸೂರು-ದರ್ಭಾಂಗ ರೈಲು ಅಪಘಾತ: ತನಿಖೆ ಆರಂಭಿಸಿದ ಎನ್​ಐಎ

ಮೈಸೂರು-ದರ್ಭಾಂಗ ರೈಲು ಅಪಘಾತ: ತನಿಖೆ ಆರಂಭಿಸಿದ ಎನ್​ಐಎ

ತಮಿಳುನಾಡಿನಲ್ಲಿ ಸಂಭವಿಸಿದ ಮೈಸೂರು-ದರ್ಭಾಂಗ ರೈಲು ಅಪಘಾತದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆಯನ್ನು ಪ್ರಾರಂಭಿಸಿದೆ.

ಮೈಸೂರು-ದರ್ಭಾಂಗ ಬಾಗಮತಿ ಎಕ್ಸ್‌ಪ್ರೆಸ್ ರೈಲು ನಿಂತಿದ್ದ ಸರಕು ಸಾಗಣೆ ರೈಲಿಗೆ ಡಿಕ್ಕಿಯಾದ ಸ್ಥಳಕ್ಕೆ ಎನ್‌ಐಎ ತಂಡ ಆಗಮಿಸಿದೆ. ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದರು.

ಶುಕ್ರವಾರ ನಡೆದ ಅಪಘಾತದಲ್ಲಿ ಎಕ್ಸ್‌ಪ್ರೆಸ್ ರೈಲಿನ 12 ಬೋಗಿಗಳು ಹಳಿತಪ್ಪಿವೆ. ಕೊರುಕ್ಕುಪೇಟೆಯ ಸರ್ಕಾರಿ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಮಧ್ಯೆ ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್, ಕೇಂದ್ರ ಸರ್ಕಾರವು ರೈಲು ಅಪಘಾತಗಳನ್ನು ತಡೆಗಟ್ಟಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಟೀಕಿಸಿದರು.

Join Whatsapp
Exit mobile version