Home ಟಾಪ್ ಸುದ್ದಿಗಳು ಮೈಸೂರು | ಪತ್ರಕರ್ತನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಮೈಸೂರು | ಪತ್ರಕರ್ತನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಮೈಸೂರು: “ಅಲ್ ಕೌಸರ್“ ಚಾನೆಲ್ ನ ವರದಿಗಾರ ಖೈಸರ್ ಎಂಬವರ ಮೇಲೆ ಸಂಘಪರಿವಾರದವರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.


ನಿನ್ನೆ ನಂಜನಗೂಡಿನಲ್ಲಿ ದೇವಸ್ಥಾನ ತೆರವುಗೊಳಿಸಿರುವುದನ್ನು ಖಂಡಿಸಿ ನಡೆಸುತ್ತಿದ್ದ ಪ್ರತಿಭಟನೆಯ ವರದಿಗೆ ತೆರಳಿದ್ದ ಪತ್ರಕರ್ತನ ಮೇಲೆ ಹಲ್ಲೆ ನಡೆಸಲಾಗಿತ್ತು. ಈ ಸಂಬಂಧ ಅವರು ಪೊಲೀಸರಿಗೆ ದೂರು ನೀಡಿದ್ದರು.
ಶುಕ್ರವಾರ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಜಿಲ್ಲಾ ಪತ್ರಕರ್ತರ ಸಂಘ ಕೂಡ ಒತ್ತಾಯಿಸಿತ್ತು.


ಮೈಸೂರಿನಲ್ಲಿ ಎಸ್ ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದರು.

Join Whatsapp
Exit mobile version