ಮೈಸೂರು ಅರಮನೆ ಹಿಂದೂ ಧರ್ಮ ರಕ್ಷಣೆಗೆ ಸದಾ ಸಿದ್ಧ: ಯದುವೀರ ಒಡೆಯರ್

Prasthutha|

ಮೈಸೂರು: ಮೈಸೂರು ಅರಮನೆ ಹಿಂದೂ ಧರ್ಮ ರಕ್ಷಣೆಗೆ ಹಿಂದೆಯೂ ಸದಾ ಸಿದ್ಧವಾಗಿತ್ತು, ಈಗಲೂ ಧರ್ಮ ರಕ್ಷಣೆಗೆ ನಾವು ಸಿದ್ಧವಾಗಿದ್ದೇವೆ ಎಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

- Advertisement -

ಚಾಮರಾಜನಗರದ ನಂದಿ ಭವನದಲ್ಲಿ ಆಯೋಜಿಸಿರುವ ಎಬಿವಿಪಿ 41ನೇ ರಾಜ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ನಮ್ಮ ಸಮಾಜದಲ್ಲಿನ ಬಹುತೇಕ ಸಮಸ್ಯೆಗಳಿಗೆ ಹಿಂದೂ ಧರ್ಮದಲ್ಲೇ ಪರಿಹಾರ, ಉತ್ತರವಿದೆ. ಆದ್ದರಿಂದ‌ ಧರ್ಮ ರಕ್ಷಣೆ ಅಗತ್ಯವಾಗಿದೆ. ಧರ್ಮ ರಕ್ಷಣೆಗೆ ಜಾತಿ-ಜಾತಿಗಳು ಒಗ್ಗಟ್ಟಾಗಬೇಕು ಎಂದು ತಿಳಿಸಿದರು.

ಕಡಿಮೆ ಸಂಖ್ಯೆಯಲ್ಲಿದ್ದ ಬ್ರಿಟಿಷರು ಭಾರತವನ್ನು ಆಳಲು ಸಾಧ್ಯವಾಗಿದ್ದು ನಮ್ಮಲ್ಲಿ ಒಗ್ಗಟ್ಟಿಲ್ಲದ ಕಾರಣದಿಂದಾಗಿ. ಜಯ ಚಾಮರಾಜ ಒಡೆಯರ್ ವಿಶ್ವ ಹಿಂದೂ ಪರಿಷತ್‌ನ ಅದ್ಯಕ್ಷರಾಗಿದ್ದರು. ಜೊತೆಗೆ ಬೇಸಿಗೆ ಅರಮನೆಯಲ್ಲಿ ವಿಎಚ್‌ ಪಿ ಸಮ್ಮೇಳನವೂ ನಡೆದಿತ್ತು ಎಂದು ನೆನಪಿಸಿಕೊಂಡರು.

Join Whatsapp