ನವೆಂಬರ್ ವೇಳೆಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆ: ಹೆಚ್‌’ಡಿಕೆ ಭವಿಷ್ಯ

Prasthutha|

- Advertisement -

ರಾಮನಗರ: ನವೆಂಬರ್ ವೇಳೆಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಗಳು ಆಗಲಿವೆ, ಕಾಯ್ದು ನೋಡಿ ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಚುನಾವಣಾ ಫಲಿತಾಂಶದ ಬಳಿಕ ಇದೇ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಆಗಮಿಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ, ಕೃತಜ್ಞತಾ ಸಭೆಯನ್ನು ಹಮ್ಮಿಕೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ಬಹುಮತದ ಸರ್ಕಾರ ಬಂದಿದೆ ಎಂದು ಭಾವಿಸಬೇಡಿ. ಲೋಕಸಭಾ ಚುನಾವಣೆ ಬಳಿಕ ಏನು ಬೆಳವಣಿಗೆ ಆಗುತ್ತದೆ ಎಂದು ನೋಡೋಣ. ಈಗಿನ ರಾಜಕೀಯ ಬೆಳವಣಿಗೆ ಬಗ್ಗೆ ಯಾವುದೇ ಅಂಜಿಕೆ ಬೇಡ ಎಂದರು.

Join Whatsapp