ಎನ್ ಆರ್ ಪುರ: ಯುವಕ ಆತ್ಮಹತ್ಯೆ; ಕಾರಣ ನಿಗೂಢ

Prasthutha|

ಚಿಕ್ಕಮಗಳೂರು: ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ನರಸಿಂಹರಾಜಪುರದ ಶೆಟ್ಟಿಕೊಪ್ಪದಲ್ಲಿ ನಡೆದಿದೆ.

ನರಸಿಂಹರಾಜಪುರ ತಾಲೂಕಿನ ಶೆಟ್ಟಿಕೊಪ್ಪ ಸಮೀಪದ ದೊಡ್ಡಹಟ್ಟಿ ನಿವಾಸಿ ಗಿರೀಶ್ ಆತ್ಮಹತ್ಯೆಗೆ ಶರಣಾಗಿರುವ ಯುವಕ. ಮನೆಯ ಸಮೀಪದಲ್ಲಿರುವ ಅರಣ್ಯ ಪ್ರದೇಶದಲ್ಲಿ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

- Advertisement -

ಎಲ್ಲರೊಡನೆ ಉತ್ತಮವಾಗಿ ವರ್ತಿಸುತ್ತಿದ್ದ ಯುವಕ ಗಿರೀಶ್ ನ, ಸಾವಿನ ಕುರಿತು ಮನೆಯವರು, ಸಂಬಂಧಿಕರು ಹಾಗೂ ಸ್ನೇಹಿತರು ಬೇಸರ ವ್ಯಕ್ತಪಡಿಸಿದ್ದಾರೆ.


ಘಟನಾ ಸ್ಥಳಕ್ಕೆ ಧಾವಿಸಿರುವ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣಗಳೇನು ಎಂಬ ಮಾಹಿತಿ ಪೊಲೀಸರ ಸಂಪೂರ್ಣ ತನಿಖೆಯ ನಂತರವಷ್ಟೇ ತಿಳಿಯಲಿದೆ.

Join Whatsapp