ನಾಗಮಂಗಲ ಗಲಭೆ: 54 ಆರೋಪಿಗಳ ಬಂಧನ

Prasthutha|

ನಾಗಮಂಗಲ: ಬುಧವಾರ ರಾತ್ರಿ ನಾಗಮಂಗಲ ಪಟ್ಟಣದಲ್ಲಿ ನಡೆದ ಘಟನಾ ಸ್ಥಳಕ್ಕೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಭೇಟಿ ನೀಡಿ, ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

- Advertisement -


ಪ್ರತ್ಯಕ್ಷದರ್ಶಿಗಳು, ಅಂಗಡಿ, ಗ್ಯಾರೇಜ್ ಗಳ ಮಾಲೀಕರು ಹಾಗೂ ಸ್ಥಳೀಯ ನಿವಾಸಿಗಳೊಂದಿಗೆ ಮಾತುಕತೆ ನಡೆಸಿ, ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡು ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 54 ಆರೋಪಿಗಳನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮವಹಿಸಲಾಗುವುದು ಎಂದರು.

- Advertisement -


ಈ ಘಟನೆ ನಡೆದಿರುವುದು ದುರದೃಷ್ಟಕರ. ಆಕಸ್ಮಿಕವಾಗಿ ನಡೆದ ಘಟನೆ, ನಂತರ ದೊಡ್ಡ ಮಟ್ಟದ ಗಲಭೆಗೆ ಕಾರಣವಾಗಿದೆ ಎಂದು ಚಲುವರಾಯಸ್ವಾಮಿ ತಿಳಿಸಿದರು.


ಕೋಮು ಸೌಹಾರ್ದ ಕದಡುವ ಕೆಲಸವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ನಮ್ಮ ಜನರಿಗೆ ಶಾಂತಿ ಸೌಹಾರ್ದದಿಂದ ಬದುಕುವ ವಾತಾವರಣ ಕಲ್ಪಿಸಿಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.



Join Whatsapp
Exit mobile version