ಶೀಘ್ರದಲ್ಲೇ ಲೇಡಿ ಹಿಲ್ ವೃತ್ತಕ್ಕೆ ನಾರಾಯಣ ಗುರು ಹೆಸರು: ಮೇಯರ್ ಭರವಸೆ

Prasthutha|

ಮಂಗಳೂರು: ನಗರದ ಲೇಡಿ ಹಿಲ್ ವೃತ್ತಕ್ಕೆ ಶೀಘ್ರದಲ್ಲೆ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತ ಎಂದು ಮರುನಾಮಕರಣ ಮಾಡಲಾಗುವುದು ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ಅವರು ತಮ್ಮನ್ನು ಭೇಟಿಯಾದ ಮಂಗಳೂರು ತಾಲೂಕು ಬಿಲ್ಲವ ಸಂಘದ ಮುಖಂಡರಿಗೆ ಭರವಸೆ ನೀಡಿದ್ದಾರೆ.

- Advertisement -

ನಾರಾಯಣ ಗುರು ವೃತ್ತ ನಾಮಕರಣ ಆದಷ್ಚು ಶೀ ಘ್ರ ನಡೆಸುವಂತೆ ಮಂಗಳೂರು ತಾಲೂಕು ಬಿಲ್ಲವ ಸಂಘದ ನಿಯೋಗವು ಮೇಯರ್ ಅವರಿಗೆ ಮನವಿ ಸಲ್ಲಿಸಿತು.

ಈ ಸಂದರ್ಭದಲ್ಲಿ ಮಾತನಾಡಿದ ಮೇಯರ್, ನಾಮಕರಣದ ವಿಚಾರದಲ್ಲಿ ಸರಕಾರಕ್ಕೆ ಬರೆಯಲಾಗಿದ್ದು, ನೆನೆಪೋಲೆಯನ್ನು ಕೂಡ ಬರೆಯಲಾಗಿದೆ. ಪೊಲೀಸ್ ಇಲಾಖೆಯಿಂದ ವರದಿ ಕೂಡ ಮಾಡಲಾಗಿದೆ. ಸರಕಾರದಿಂದ ಬಂದ ಕೂಡಲೇ ನಾಮಕರಣ ಮಾಡಲಾಗುವುದು ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ನಿಯೋಗಕ್ಕೆ ತಿಳಿಸಿದ್ದಾರೆ.

- Advertisement -

ಮಂಗಳೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಜೀತೇಂದ್ರ ಜೆ. ಸುವರ್ಣ, ಗೌರವಾಧ್ಯಕ್ಷ ರಂಜನ್ ಮಿಜಾರ್, ಕಾರ್ಯದರ್ಶಿಲೋಕನಾಥ ಪೂಜಾರಿ,ರವಿಕಲಾ, ಪಾರ್ವತಿ ಅಮೀನ್, ಶ್ರೀನಿವಾಸ್, ಸುರೇಶ್ಚಂದ್ರ ಕೋಟ್ಯಾನ್,ಪ್ರಜ್ವಲ್, ಸುನೀಲ್ ಅವರಿದ್ದರು.



Join Whatsapp