ನಾರಾಯಣ ನೇತ್ರಾಲಯದ ಮುಖ್ಯಸ್ಥ, ಖ್ಯಾತ ನೇತ್ರ ತಜ್ಞ ಡಾ| ಕೆ.ಭುಜಂಗ ಶೆಟ್ಟಿ ನಿಧನ

Prasthutha|

- Advertisement -

ಬೆಂಗಳೂರು: ನಾರಾಯಣ ನೇತ್ರಾಲಯದ ಮುಖ್ಯಸ್ಥರೂ ಆಗಿರುವ ಖ್ಯಾತ ನೇತ್ರ ತಜ್ಞ ಡಾ. ಕೆ. ಭುಜಂಗಶೆಟ್ಟಿ ಅವರು ನಿಧನ ಹೊಂದಿದ್ದಾರೆ.

ನಿನ್ನೆ(ಮೇ.19) ಆಸ್ಪತ್ರೆಗೆ ಹೋಗಿ ಚಿಕಿತ್ಸೆ ನೀಡಿದ್ದ ಡಾ.ಭುಜಂಗ ಶೆಟ್ಟಿ ಅವರಿಗೆ ಸಂಜೆ 6 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತವಾಗಿತ್ತು. ಆಸ್ಪತ್ರೆಯಿಂದ ಮನೆಗೆ ವಾಪಸಾದ ಬಳಿಕ ಹೃದಯಾಘಾತವಾಗಿದ್ದು, ಕೂಡಲೇ ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

- Advertisement -

1978 ರಲ್ಲಿ ಎಂಬಿಬಿಎಸ್ ಮಾಡಿದ ಅವರು, ಬೆಂಗಳೂರು ವೈದ್ಯಕೀಯ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿದ್ದಾರೆ. ಅವರು ಎಂಬತ್ತರ ದಶಕದಲ್ಲಿ ಸಣ್ಣ ಕ್ಲಿನಿಕ್‌ನಲ್ಲಿ ನೇತ್ರಶಾಸ್ತ್ರವನ್ನು ಪ್ರಾರಂಭಿಸಿದರು. ಭವಿಷ್ಯದ ಅಗತ್ಯಗಳನ್ನು ಪೂರೈಸುವ ದೂರದೃಷ್ಟಿ ಹೊಂದಿದ್ದ ಅವರು ಅಭಿವೃದ್ಧಿಯಲ್ಲಿ ಉತ್ಸಾಹ ತೋರಿದರು. ಅದರಂತೆ ಕ್ಲೀನಿಕ್ ಅನ್ನು ಅಕ್ಟೋಬರ್ 1993 ರಲ್ಲಿ ದೊಡ್ಡ ಮಟ್ಟದಲ್ಲಿ ಅಭಿವೃದ್ಧಿ ಮಾಡಿದರು.

ನಂತರ ಕಣ್ಣಿನ ಕ್ಲಿನಿಕ್ ಕಣ್ಣಿನ ಆಸ್ಪತ್ರೆಯಾಗಿ ಮಾರ್ಪಟ್ಟಿತು ಮತ್ತು ವರ್ಷದಿಂದ ವರ್ಷಕ್ಕೆ ಬೆಳೆಯಲು ಪ್ರಾರಂಭಿಸಿತು. ಗುಣಮಟ್ಟದ ಕಣ್ಣಿನ ಆರೈಕೆಗಾಗಿ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು, ಆಧುನಿಕ ಅತ್ಯಾಧುನಿಕ ಉಪಕರಣಗಳನ್ನು ಅಳವಡಿಸಲಾಯಿತು. ಇದಕ್ಕೆ ನಿರಂತರ ಪ್ರೋತ್ಸಾಹವನ್ನು ನೀಡುತ್ತಾ ಬಂದಿದ್ದರು. ಆ ಮೂಲಕ ನಾರಾಯಣ ನೇತ್ರಾಲಯವನ್ನು ಕರ್ನಾಟಕದ ಅತಿದೊಡ್ಡ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾಗಿ ಪರಿವರ್ತಿಸಲು ಕಾರಣರಾಗಿದ್ದರು. ಅವರು ಕಣ್ಣಿನ ಪೊರೆ ಮತ್ತು ಫಾಕೋಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸಕರಾಗಿದ್ದರು. ಅವರು ನಾರಾಯಣ ನೇತ್ರಾಲಯದ ಅಧ್ಯಕ್ಷರೂ ಆಗಿದ್ದರು.

Join Whatsapp