Home ಟಾಪ್ ಸುದ್ದಿಗಳು ನರೇಂದ್ರ ದಾಭೋಲ್ಕರ್ ಹತ್ಯೆ: ಮೂವರು ಆರೋಪಿಗಳು ಖುಲಾಸೆ

ನರೇಂದ್ರ ದಾಭೋಲ್ಕರ್ ಹತ್ಯೆ: ಮೂವರು ಆರೋಪಿಗಳು ಖುಲಾಸೆ

ಪುಣೆ: ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಇಂದು ಪುಣೆ ನ್ಯಾಯಾಲಯವು ಇಬ್ಬರನ್ನು ದೋಷಿಗಳೆಂದು ಘೋಷಿಸಿದೆ ಹಾಗೂ ಮೂವರನ್ನು ಖುಲಾಸೆಗೊಳಿಸಿದೆ.


ದೋಷಿಗಳೆಂದು ನ್ಯಾಯಾಲಯದಿಂದ ಘೋಷಿಸಲ್ಪಟ್ಟವರಾದ ಸಚಿನ್ ಅಂದೂರೆ ಹಾಗೂ ಶರದ್ ಕಲಸ್ಕರ್ಗೆ ಜೀವಾವಧಿ ಶಿಕ್ಷೆ ಹಾಗೂ ರೂ 5 ಲಕ್ಷ ದಂಡ ವಿಧಿಸಲಾಗಿದೆ. ಡಾ ವೀರೇಂದ್ರ ಸಿಂಗ್ ತಾವಡೆ, ವಿಕ್ರಮ್ ಭಾವೆ ಮತ್ತು ಸಂಜೀವ್ ಪುನಲೇಕರ್ ಅವರನ್ನು ಖುಲಾಸೆಗೊಳಿಸಿದೆ.

ಮಹಾರಾಷ್ಟ್ರ ಅಂಧಶ್ರದ್ಧ ನಿರ್ಮೂಲನ್ ಸಮಿತಿ ಸ್ಥಾಪಕರಾಗಿದ್ದ ದಾಭೋಲ್ಕರ್ ಅವರನ್ನು ಪುಣೆಯಲ್ಲಿ 2013ರಲ್ಲಿ ಅವರು ಬೆಳಗ್ಗಿನ ವಾಕಿಂಗ್ಗೆ ಹೋಗಿದ್ದ ವೇಳೆ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದರು.

Join Whatsapp
Exit mobile version