Home ಟಾಪ್ ಸುದ್ದಿಗಳು ಆರ್ಥಿಕತೆ ಸುಧಾರಣೆಯ ಕ್ರಮಕ್ಕೆ ಒತ್ತಾಯಿಸಿ ಪ್ರಧಾನಿಗೆ ಬರೆದ 12 ಪತ್ರಗಳನ್ನು ಕಡೆಗಣಿಸಲಾಗಿದೆ: ಬಿಜೆಪಿ ಸಂಸದ ಸುಬ್ರಮಣಿಯನ್...

ಆರ್ಥಿಕತೆ ಸುಧಾರಣೆಯ ಕ್ರಮಕ್ಕೆ ಒತ್ತಾಯಿಸಿ ಪ್ರಧಾನಿಗೆ ಬರೆದ 12 ಪತ್ರಗಳನ್ನು ಕಡೆಗಣಿಸಲಾಗಿದೆ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಪ್ರಸಕ್ತ ಕುಸಿತಕ್ಕೊಳಗಾಗಿರುವ ದೇಶದ ಆರ್ಥಿಕತೆಯ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಕೋರಿ ಪ್ರಧಾನಿ ಮೋದಿಗೆ ನಾನು ಬರೆದ 12 ಪತ್ರಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ತಿಳಿಸಿದ್ದಾರೆ.

ಹದಗೆಟ್ಟ ದೇಶದ ಆರ್ಥಿಕತೆಯನ್ನು ಸರಿಪಡಿಸುವಂತೆ ಸಲಹೆ ನೀಡಿ ಹಲವಾರು ಜನರು ಕರೆ ಮಾಡುತ್ತಿದ್ದಾರೆ. ಸಣ್ಣ ಮತ್ತು ಮಧ್ಯಮ ವ್ಯಾಪಾರಿಗಳು ಪ್ರಧಾನಿಗೆ ಕರೆ ಮಾಡಿ ದೇಶದ ಆರ್ಥಿಕ ಕುಸಿತದಿಂದಾಗಿ ವ್ಯವಹಾರ ನಡೆಸಲಾಗುತ್ತಿಲ್ಲ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ನಾನು ಪ್ರಧಾನಿಗೆ ಪತ್ರ ಬರೆದಿದ್ದೇನೆ. ಆದರೆ ಈ ಪತ್ರದ ಅಂಶಗಳನ್ನು ಅವರು ಪರಿಗಣಿಸಿಲ್ಲ ಎಂದು ಟ್ವೀಟ್ ಮೂಲಕ ವಿಷಾದಿಸಿದ್ದಾರೆ.

ಈ ಹಿಂದೆ ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿಯನ್ನು ಸಂಪರ್ಕಿಸಿದ ಸುದ್ದಿಗಾರರು ಸಂಸದ ಸುಬ್ರಮಣಿಯನ್ ಸ್ವಾಮಿ ಕುರಿತು ಪ್ರತಿಕ್ರಿಯೆ ಕೇಳಿದಾಗ, ಅವರು ಪ್ರೀ ಲ್ಯಾನ್ಸರ್ ರಾಜಕಾರಣಿ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಮೂದಲಿಸಿದ್ದರು. ಇದಕ್ಕೆ ಕೆಂಡಾಮಂಡಲವಾದ ಸುಬ್ರಮಣಿಯನ್ ಸ್ವಾಮಿ “ ಅಧಿಕಾರಕ್ಕಾಗಿ ಬೂಟು ನೆಕ್ಕುವ ರಾಜಕಾರಣಿ ನಾನಲ್ಲ” ಎಂದು ಮುಖ್ಯಮಂತ್ರಿ ಬೊಮ್ಮಾಯಿ ಗೆ ತಿರುಗೇಟು ನೀಡಿದ್ದರು. ಮಾತ್ರವಲ್ಲ ಲಸಿಕೆ ಸಂಭ್ರಮದ ಮಧ್ಯೆ ಸರ್ಕಾರದ ತಪ್ಪು ನೀತಿಯಿಂದಾಗಿ ಕುಸಿಯುತ್ತಿರುವ ಆರ್ಥಿಕತೆಯ ಬಗ್ಗೆ ಎಚ್ಚರ ವಹಿಸಬೇಕಾಗಿದೆ ಎಂದು ಅವರು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

Join Whatsapp
Exit mobile version