Home ಟಾಪ್ ಸುದ್ದಿಗಳು ಸ್ವಾಮಿ ವಿವೇಕಾನಂದರ ಪುನರ್ಜನ್ಮ ನರೇಂದ್ರ ಮೋದಿ: ಸಚಿವೆ ಶಶಿಕಲಾ ಜೊಲ್ಲೆ

ಸ್ವಾಮಿ ವಿವೇಕಾನಂದರ ಪುನರ್ಜನ್ಮ ನರೇಂದ್ರ ಮೋದಿ: ಸಚಿವೆ ಶಶಿಕಲಾ ಜೊಲ್ಲೆ

ಹೊಸಪೇಟೆ : ಸ್ವಾಮಿ ವಿವೇಕಾನಂದರ ಪುನರ್ಜನ್ಮ ನರೇಂದ್ರ ಮೋದಿ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ‌ ತಿಳಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನರೇಂದ್ರ ಮೋದಿಯವರು ದೇಶದ ಸಂಸ್ಕೃತಿ, ಪರಂಪರೆಯನ್ನು ವಿಶ್ವಕ್ಕೆ‌ ಪರಿಚಯಿಸಿದ್ದರು. ಅದೇ ಕೆಲಸ ಮೋದಿಯವರು ಮಾಡುತ್ತಿದ್ದಾರೆ. ಭಾರತಕ್ಕೆ ವಿಶ್ವಗುರುವಿನ ಸ್ಥಾನ ತಂದುಕೊಟ್ಟಿದ್ದಾರೆ ಎಂದರು.

ಮೋದಿ ಅವರ ನೇತೃತ್ವದಲ್ಲಿ ಭಾರತ ಎಲ್ಲ ರಂಗಗಳಲ್ಲಿ ಅಭಿವೃದ್ಧಿ ಕಾಣುತ್ತಿದೆ. ದೇಶ ಸುಭದ್ರವಾಗಿದೆ ಎಂದು ಹೇಳಿದರು.

Join Whatsapp
Exit mobile version