Home ಟಾಪ್ ಸುದ್ದಿಗಳು ಪುತ್ತೂರಿನ ರಾಕೇಶ್ ಕೃಷ್ಣ, ಬೆಂಗಳೂರಿನ ವೀರ್ ಕಶ್ಯಪ್ ಸೇರಿ 32 ಮಕ್ಕಳಿಗೆ ರಾಷ್ಟ್ರೀಯ ಬಾಲ ಪುರಸ್ಕಾರ

ಪುತ್ತೂರಿನ ರಾಕೇಶ್ ಕೃಷ್ಣ, ಬೆಂಗಳೂರಿನ ವೀರ್ ಕಶ್ಯಪ್ ಸೇರಿ 32 ಮಕ್ಕಳಿಗೆ ರಾಷ್ಟ್ರೀಯ ಬಾಲ ಪುರಸ್ಕಾರ

ರಾಕೇಶ್ ಕೃಷ್ಣ, ವೀರ್ ಕಶ್ಯಪ್

ನವದೆಹಲಿ : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ರಾಕೇಶ್ ಕೃಷ್ಣ ಮತ್ತು ಬೆಂಗಳೂರಿನ ವೀರ್ ಕಶ್ಯಪ್ ಸೇರಿದಂತೆ 32 ಮಕ್ಕಳು ಪ್ರಧಾನಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಪುತ್ತೂರಿನ ರಾಕೇಶ್ ಕೃಷ್ಣ ಮತ್ತು ಬೆಂಗಳೂರಿನ ವೀರ್ ಕಶ್ಯಪ್ ಕರ್ನಾಟಕದಿಂದ ಆಯ್ಕೆಯಾಗಿರುವ ಇಬ್ಬರು ಬಾಲಕರು. ಇವರಿಬ್ಬರಿಗೂ ಆವಿಷ್ಕಾರ ವಲಯದಲ್ಲಿ ಪುರಸ್ಕಾರ ಲಭಿಸಲಿದೆ.

32 ಮಕ್ಕಳ ಪೈಕಿ ನಾವೀನ್ಯತೆ ವಿಭಾಗದಲ್ಲಿ 9, ಕಲೆ ಸಂಸ್ಕೃತಿ ವಿಭಾಗದಲ್ಲಿ 7, ಶೈಕ್ಷಣಿಕ ಹಾಗೂ ಕ್ರೀಡಾ ಸಾಧನೆ ವಿಭಾಗದಲ್ಲಿ 5, ಶೌರ್ಯ ವಿಭಾಗದಲ್ಲಿ 3 ಮತ್ತು ಸಾಮಾಜಿಕ ಸೇವಾ ವಿಭಾಗದಲ್ಲಿ ಒಬ್ಬರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕರ್ನಾಟಕದಿಂದ ಆಯ್ಕೆಯಾಗಿರುವ ಮಕ್ಕಳನ್ನು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿ ಅಭಿನಂದಿಸಿದ್ದಾರೆ.

Join Whatsapp
Exit mobile version