ಉಕ್ರೇನ್ ನಿಂದ ತಾಯ್ನಾಡಿಗೆ ಬಂದ ನವೀನ್ ಮೃತದೇಹ

Prasthutha|

ಬೆಂಗಳೂರು: ಉಕ್ರೇನ್‌ ನಲ್ಲಿ ಮೃತಪ ಹಾವೇರಿ ಜಿಲ್ಲೆ ಚಳಗೇರಿಯ ವಿದ್ಯಾರ್ಥಿ ನವೀನ್ ಅವರ ಪಾರ್ಥಿವ ಶರೀರವನ್ನು ಸೋಮವಾರ ಬೆಂಗಳೂರಿಗೆ ತರಲಾಯಿತು.

- Advertisement -

 ಉಕ್ರೇನ್ ​ನಿಂದ ದೆಹಲಿಗೆ, ದೆಹಲಿಯಿಂದ ಬೆಂಗಳೂರಿಗೆ ಬಂದ ನವೀನ್ ಅವರ ಮೃತದೇಹಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೌರವ ಸಲ್ಲಿಸಿದರು. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯ ನೋಡೆಲ್ ಅಧಿಕಾರಿ ಮನೋಜ್ ರಾಜನ್, ಸರ್ಕಾರದ ಪರವಾಗಿ ದಾಖಲಾತಿ ಮತ್ತು ಇತರ ವಿಧಿವಿಧಾನಗಳನ್ನು ನಿರ್ವಹಿಸಿದರು. ಬೆಳಿಗ್ಗೆ 9 ಗಂಟೆಯ ಹೊತ್ತಿಗೆ ನವೀನ್ ಪಾರ್ಥಿವ ಶರೀರವು ಸ್ವಗ್ರಾಮ ಚಳಗೇರಿಗೆ ತಲುಪಲಿದೆ.



Join Whatsapp