ಛತ್ತೀಸ್‌ಘಡದಲ್ಲಿ ಭದ್ರತಾ ಸಿಬ್ಬಂದಿಗಳ ಮೇಲೆ ನಕ್ಸಲರ ದಾಳಿ | ಮೂರು ಬಲಿ

Prasthutha|

ಛತ್ತೀಸ್‌ಘಡದಲ್ಲಿ ಭದ್ರತಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್‌ಗೆ ಬಾಂಬ್ ದಾಳಿ ನಡೆಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಛತ್ತೀಸ್‌ಘಡದ ನಾರಾಯಣಪುರ ಜಿಲ್ಲೆಯಲ್ಲಿ ಈ ದಾಳಿ ನಡೆದಿದೆ.

- Advertisement -

ಘಟನೆಯಲ್ಲಿ ಮೂರು ಜನರು ಸಾವನ್ನಪ್ಪಿ ಕನಿಷ್ಠ 10 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಇದು ನಕ್ಸಲರು ನಡೆಸಿದ ದಾಳಿಯಾಗಿದೆ ಎಂದು ಪೊಲೀಸರು ತಿಳಿಸಿರುವುದಾಗಿ ರಾಷ್ಟ್ರೀಯ ಮಾಧ್ಯಮ ವರದಿ ಮಾಡಿದೆ. ಮಾವೋವಾದಿಗಳ‌ ಪ್ರಾಬಲ್ಯವಿರುವ ಪ್ರದೇಶದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಹಿಂದಿರುಗುತ್ತಿದ್ದ ಗುಂಪನ್ನು ಗುರಿಯಾಗಿಸಿ ಈ ಸ್ಫೋಟ ನಡೆಸಲಾಗಿದೆ ಎಂದು ಛತ್ತೀಸ್‌ಘಡದ ಡಿಜಿಪಿ ಡಿಎಂ ಅವಸ್ಥಿ ಹೇಳಿದ್ದಾರೆ. ದಾಳಿಯ ಸಂದರ್ಭ 20 ಕ್ಕೂ ಹೆಚ್ಚು ಜನರು ಬಸ್‌ನಲ್ಲಿದ್ದರು ಎಂದು ಅವರು ಹೇಳಿದ್ದಾರೆ.

Join Whatsapp