ಎನ್ ಸಿಸಿ ಕಿರಿಯ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಹಿರಿಯ ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು

Prasthutha|

ಮುಂಬೈ: ಮಹಾರಾಷ್ಟ್ರದ ಥಾಣೆಯಲ್ಲಿರುವ ವಿದ್ಯಾ ಪ್ರಸಾರಕ್ ಮಂಡಲ್ ಕಾಲೇಜಿನಲ್ಲಿ ಎನ್ ಸಿಸಿ ವಿದ್ಯಾರ್ಥಿಗಳನ್ನು ಹಿರಿಯ ವಿದ್ಯಾರ್ಥಿಯೊರ್ವ ಅಮಾನುಷವಾಗಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಎನ್ ಸಿಸಿ ವಿದ್ಯಾರ್ಥಿ ವಿರುದ್ದ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

- Advertisement -


ಎನ್ ಸಿಸಿ ತರಭೇತಿ ವೇಳೆ 8 ಮಂದಿ ಎನ್ಸಿಸಿ ಕಿರಿಯ ವಿದ್ಯಾರ್ಥಿಗಳು ಶಿಕ್ಷೆಯ ಭಾಗವಾಗಿ ಮಳೆಯಲ್ಲಿ ಕೆಸರಿನಲ್ಲಿ ತಲೆ ಬಾಗಿಸ ಕೈಗಳನ್ನು ಹಿಂದಕ್ಕೆ ಕಟ್ಟಿ ಕುಳಿತಿದ್ದು ಹಿರಿಯ ಎನ್ ಸಿಸಿ ತರಬೇತುದಾರನು ಈ ವಿದ್ಯಾರ್ಥಿಗಳನ್ನು ದೊಣ್ಣೆಯಿಂದ ರಭಸವಾಗಿ ಥಳಿಸಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು. ವಿದ್ಯಾರ್ಥಿಗಳು ಸಹಾಯಕ್ಕಾಗಿ ಅಳುತ್ತಿರುವಂತೆಯೇ ಅಮಾನವೀಯ ಶಿಕ್ಷೆ ನೀಡುತ್ತಿರುವ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.



Join Whatsapp