Home ಟಾಪ್ ಸುದ್ದಿಗಳು ನಿರೀಕ್ಷೆ ಭಂಗಗೊಳಿಸಿದ NDA: ಕರ್ನಾಟಕದಲ್ಲಿ ಓರ್ವ ಸಾವು, ಪ್ರಜ್ಞೆ ತಪ್ಪಿ ಬಿದ್ದ ಬಿಜೆಪಿ ಅಧ್ಯಕ್ಷ

ನಿರೀಕ್ಷೆ ಭಂಗಗೊಳಿಸಿದ NDA: ಕರ್ನಾಟಕದಲ್ಲಿ ಓರ್ವ ಸಾವು, ಪ್ರಜ್ಞೆ ತಪ್ಪಿ ಬಿದ್ದ ಬಿಜೆಪಿ ಅಧ್ಯಕ್ಷ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ನೀರಿಕ್ಷೆಗಿಂದ ಕಡಿಮೆ ಸ್ಥಾನ ಎನ್‌ಡಿಎ ಪಡೆಯುತ್ತಿರುವುದನ್ನು ಅರಗಿಸಲಾಗದೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತರಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಶಿವಪ್ರಕಾಶ್ ಹಿರೇಮಠ ಮೃತ ವ್ಯಕ್ತಿ.

ಶಿವಪ್ರಕಾಶ್ ಹಿರೇಮಠ ಕಟ್ಟಾ ಬಿಜೆಪಿ ಅಭಿಮಾನಿಯಾಗಿದ್ದರು. ಮನೆಯ ಸೋಫಾದಲ್ಲಿ ಕುಳಿತು ಟಿವಿಯಲ್ಲಿ ಫಲಿತಾಂಶ ನೋಡುವಾಗ ಎನ್‌ಡಿಎ ನಿರೀಕ್ಷೆಗಿಂತ ಕಡಿಮೆ ಸ್ಥಾನ ಗಳಿಸುತ್ತಿರುವುದಕ್ಕೆ ನೋವು ವ್ಯಕ್ತಪಡಿಸುತ್ತಿದ್ದರು. ಎನ್‌ಡಿಎ 300ರಷ್ಟು ಗಡಿ ದಾಟಲಿಲ್ಲ ಎಂದು ಪಕ್ಕದಲ್ಲಿದ್ದವರಲ್ಲಿ ಹೇಳುತ್ತಾ ಇರುವಾಗಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವೈದ್ಯರು, ಇವರು ಈಗಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್​ ಅಭ್ಯರ್ಥಿ ಗೆಲುವು ಸಾಧಿಸಿರುವ ವಿಚಾರ ಕೇಳಿ ಪ್ರಜ್ಞೆ ತಪ್ಪಿ ಬಿದ್ದ ಬಿಜೆಪಿ ನಗರ ಶಕ್ತಿಕೇಂದ್ರದ ಅಧ್ಯಕ್ಷ

ಕಲಬುರಗಿ: ಇಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಬಿಜೆಪಿಯ ಡಾ. ಉಮೇಶ್​ ಜಾಧವ್​ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್​ ಅಭ್ಯರ್ಥಿ ಗೆಲುವು ಸಾಧಿಸಿರುವ ವಿಚಾರ ಕೇಳಿ ಬಿಜೆಪಿ ನಗರ ಶಕ್ತಿಕೇಂದ್ರದ ಅಧ್ಯಕ್ಷ ಮೂರ್ಛೆ ಹೋಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುಗರಿ ವಿಶ್ವವಿದ್ಯಾಲಯದ ಆವರಣದಲ್ಲಿ ಈ ಘಟನೆ ನಡೆದಿದ್ದು, ಅಸ್ವಸ್ಥರನ್ನು ವೀರಣ್ಣ ಯಾರಿ ಎಂದು ಗುರುತಿಸಲಾಗಿದೆ.

ಕಲಬುರಗಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿದ್ದ ಮತ ಎಣಿಕೆ ವೇಳೆ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ವಿಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ್​ ಜಾಧವ್​ ಪರ ಮತಗಳ ದಾಖಲೆಯನ್ನು ಪಟ್ಟಿ ಮಾಡಿಕೊಳ್ಳುತ್ತಿದ್ದರು. ಈ ವೇಳೆ ಬಿಜೆಪಿ ಅಭ್ಯರ್ಥಿಯ ಸೋಲಿನ ಸುದ್ದಿ ಕೇಳುತ್ತಿದ್ದಂತೆ ವೀರಣ್ಣ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ಧಾರೆ.

Join Whatsapp
Exit mobile version