ಮಾನವ- ಕಾಡು ಪ್ರಾಣಿಗಳ ಸಂಘರ್ಷ ತಡೆಗೆ ಅಗತ್ಯ ಕ್ರಮ: ಸಚಿವ ಖಂಡ್ರೆ

Prasthutha|

ಬೆಳಗಾವಿ: ಮಾನವ- ಕಾಡು ಪ್ರಾಣಿಗಳ ಸಂಘರ್ಷ ತಡೆಗೆ ಅಗತ್ಯ ಕ್ರಮವಹಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

- Advertisement -

ಬೆಂಗಳೂರಿನಲ್ಲಿ 2500 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, 403 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಲಾಗಿದೆ. ಉಳಿದ ಒತ್ತುವರಿ ತೆರವುಗೊಳಿಸುವುದಕ್ಕೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ” ಎಂದು ಈಶ್ವರ ಖಂಡ್ರೆ ಅವರು ವಿಧಾನಸಭೆಯಲ್ಲಿ ತಿಳಿಸಿದರು.

ಪ್ರಶ್ನೋತ್ತೋರ ಅವಧಿಯಲ್ಲಿ ಇಂದು ಬಿಜೆಪಿ ಸದಸ್ಯ ಎಂ. ಸತೀಶರೆಡ್ಡಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ”ಒತ್ತುವರಿ ತೆರವು ಕಾರ್ಯಕ್ಕೆ ಬೆಂಗಳೂರಿನ ಶಾಸಕರು ಸಹ ಕೈಜೋಡಿಸಬೇಕು. ಈಗಾಗಲೇ ಬೆಂಗಳೂರಿನಲ್ಲಿ 500 ಹೆಕ್ಟೇರ್ ಅರಣ್ಯ ಪ್ರದೇಶ ಕಡಿಮೆಯಾಗಿದ್ದು, ಮಾನವ – ವನ್ಯಜೀವಿ ಸಂಘರ್ಷ ಬೆಂಗಳೂರು ಮಹಾನಗರದಲ್ಲಿಯೂ ಕಂಡು ಬರುತ್ತಿದೆ” ಎಂದು ಹೇಳಿದರು. ”ಕಾಡಾನೆ ಹಾವಳಿ ತಡೆಗಟ್ಟಲು ಬನ್ನೇರಘಟ್ಟ ರಾಷ್ಟ್ರೀಯ ಉದ್ಯಾನ ಬೆಂಗಳೂರು ಕೇಂದ್ರ ಸ್ಥಾನದಲ್ಲಿ ಜಿಲ್ಲಾ ಆನೆ ಕಾರ್ಯಪಡೆ ರಚಿಸಲಾಗಿದೆ. ಬೆಂಗಳೂರು ಜಿಲ್ಲೆಯ ಕಗ್ಗಲೀಪುರ, ಆನೇಕಲ್, ಯಲಹಂಕ, ಹೊಸಕೋಟೆ, ಕೆ.ಆರ್. ಪುರ ವಲಯಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆಯ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಚಿರತೆ ಕಾರ್ಯಪಡೆ ರಚಿಸಲಾಗಿದೆ ಎಂದರು.



Join Whatsapp