ಜಾತಿ ಗಣತಿ ವರದಿ ಕುರಿತು ಸಾರ್ವಜನಿಕ ಚರ್ಚೆ ಅಗತ್ಯ: ಬೊಮ್ಮಾಯಿ

Prasthutha|

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವೀಕರಿಸಿರುವ ಜಾತಿ ಗಣತಿ ವರದಿಯು ಕಾಂತರಾಜ್ ಆಯೋಗದ ವರದಿಯೋ ಅಥವಾ ಜಯಪ್ರಕಾಶ್ ಹೆಗ್ಡೆ ಆಯೋಗದ ವರದಿಯೋ ಎಂಬುದನ್ನು ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಜಾತಿ ಗಣತಿಯನ್ನು ಯಾರು ನಡೆಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ನಾಲ್ಕೈದು ಅರ್ಜಿಗಳು ಬಾಕಿ ಉಳಿದಿವೆ ಎಂದರು. ‘ಸದ್ಯದ ವರದಿಯಲ್ಲಿ, ಕೆಲವು ಉಪಜಾತಿಗಳನ್ನು ಮುಖ್ಯ ಜಾತಿಗಳಿಂದ ಪ್ರತ್ಯೇಕಿಸಲಾಗಿದೆ. ರಾಜ್ಯ ಸರ್ಕಾರ ವರದಿಯ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ವರದಿಯ ಬಗ್ಗೆ ಸಾರ್ವಜನಿಕ ಚರ್ಚೆಯಾಗಬೇಕು.

ಬಿಜೆಪಿ ಹಿಂದುಳಿದ ವರ್ಗಗಳ ವಿರುದ್ಧವಿಲ್ಲ, ಆದರೆ ಜನಸಂಖ್ಯೆಯ ಆಧಾರದ ಮೇಲೆ ಎಲ್ಲರಿಗೂ ನ್ಯಾಯ ನೀಡಬೇಕು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ವರದಿಯನ್ನು ರಾಜಕೀಯಕ್ಕೆ ಬಳಸಬಾರದು’ ಎಂದು ಹೇಳಿದರು.

Join Whatsapp