ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ 1500 ಪ್ರಯಾಣಿಕರಿಗೆ ಅಗತ್ಯ ನೆರವು

Prasthutha|

- Advertisement -

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನಿರ್ದೇಶನದಂತೆ, ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ಸುಮಾರು 1500 ಕಾರ್ಮಿಕರಿಗೆ ಬಿಬಿಎಂಪಿ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಆಹಾರ, ಕುಡಿಯುವ ನೀರು, ಸಂಚಾರಿ ಶೌಚಾಲಯ ಹಾಗೂ ವೈದ್ಯಕೀಯ ಸೌಲಭ್ಯ ಒದಗಿಸಿದ್ದಾರೆ.

ಒಡಿಶಾದಲ್ಲಿ ಸಂಭವಿಸಿರುವ ರೈಲು ಅಪಘಾತದ ದುರಂತದ ಕಾರಣ ಆ ಮಾರ್ಗದಲ್ಲಿ ಸಂಚರಿಸುವ ಹತ್ತಾರು ರೈಲುಗಳ ಪ್ರಯಾಣವನ್ನು ಸ್ಥಗಿತಗೊಳಿಸಲಾಗಿದ್ದು, ಈಶಾನ್ಯ ರಾಜ್ಯಗಳಿಗೆ ಕೋಲ್ಕತ್ತಾ ಮುಂತಾದ ರಾಜ್ಯಗಳಿಗೆ ತೆರಳಬೇಕಿದ್ದ ಕಾರ್ಮಿಕರು ಬೈಯಪ್ಪನಹಳ್ಳಿ ರೈಲು ನಿಲ್ದಾನದಲ್ಲೇ ದಿನ ಕಳೆಯುವಂತಹ ಪರಿಸ್ಥಿತಿ ಒದಗಿದ್ದರಿಂದ, ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಅಗತ್ಯ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಆಯುಕ್ತರು ಮತ್ತು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

- Advertisement -

ಈ ಹಿನ್ನಲೆಯಲ್ಲಿ ಬಿಬಿಎಂಪಿ ವಲಯ ಆಯುಕ್ತ ಪಿ.ಎನ್.ರವೀಂದ್ರ, ಜಂಟಿ ಆಯುಕ್ತರಾದ ಶ್ರೀಮತಿ ಪಲ್ಲವಿ ಮತ್ತು ತಂಡದವರ ಮಾರ್ಗದರ್ಶನದಲ್ಲಿ ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ಸುಮಾರು 1500 ವಲಸೆ ಕಾರ್ಮಿಕರಿಗೆ ಊಟ, ತಿಂಡಿ, ನೀರು ಇತ್ಯಾದಿಗಳ ವ್ಯವಸ್ಥೆಯನ್ನು ಪೂರೈಸಲಾಗಿದೆ.ಬಿಬಿಎಂಪಿ ವತಿಯಿಂದ ಅವರಿಗೆ ವೈದ್ಯಕೀಯ ಸೌಲಭ್ಯ ಹಾಗೂ ಸಂಚಾರಿ ಶೌಚಾಲಯಗಳ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.

Join Whatsapp