Home ಟಾಪ್ ಸುದ್ದಿಗಳು ನೇಹಾ ಕೊಲೆ ಪ್ರಕರಣದ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

ನೇಹಾ ಕೊಲೆ ಪ್ರಕರಣದ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸಬಾರದು, ಏನನ್ನೂ ಮುಚ್ಚಿಡಬಾರದು ಎಂದಾದರೆ ರಾಜ್ಯ ಸರ್ಕಾರ ತಕ್ಷಣ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.


ನೇಹಾ ನಿವಾಸಕ್ಕೆ ತೆರಳಿ, ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.


ನೇಹಾ ಹತ್ಯೆ ಪ್ರಕರಣದ ತನಿಖೆ ದಾರಿತಪ್ಪಿದೆ. ರಾಜ್ಯ ಸರ್ಕಾರಕ್ಕೆ ಯಾರನ್ನೂ ರಕ್ಷಣೆ ಮಾಡುವ ಉದ್ದೇಶವಿಲ್ಲದಿದ್ದರೆ, ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸಲಿ. ಈ ಕೊಲೆಯ ಹಿಂದೆ ಇನ್ನಷ್ಟು ಜನ ಇದ್ದಾರೆ, ಸಮಗ್ರ ತನಿಖೆಯಾಗಬೇಕಾದರೆ ಸಿಬಿಐಗೆ ಕೊಡಬೇಕು ಎನ್ನುವುದು ಕುಟುಂಬಸ್ಥರ ಆಗ್ರಹ. ಆದರೆ, ರಾಜ್ಯ ಸರ್ಕಾರ ಸಿಐಡಿಗೆ ಕೊಟ್ಟು ಕೈ ತೊಳೆದುಕೊಳ್ಳುವ ಕೆಲಸ ಮಾಡಿದೆ ಎಂದು ಆರೋಪಿಸಿದರು.

Join Whatsapp
Exit mobile version