Home ಟಾಪ್ ಸುದ್ದಿಗಳು ಪ್ರಧಾನಿ, ಹಣಕಾಸು ಸಚಿವರಿಗೆ ಅರ್ಥಶಾಸ್ತ್ರದ ಗಂಧಗಾಳಿ ಗೊತ್ತಿಲ್ಲ: ಸುಬ್ರಮಣಿಯನ್ ಸ್ವಾಮಿ

ಪ್ರಧಾನಿ, ಹಣಕಾಸು ಸಚಿವರಿಗೆ ಅರ್ಥಶಾಸ್ತ್ರದ ಗಂಧಗಾಳಿ ಗೊತ್ತಿಲ್ಲ: ಸುಬ್ರಮಣಿಯನ್ ಸ್ವಾಮಿ

ಮಥುರಾ: ಪ್ರಧಾನ‌ಮಂತ್ರಿ ಮತ್ತು ವಿತ್ತ ಸಚಿವರಿಗೆ ಅರ್ಥಶಾಸ್ತ್ರದ ಗಂಧಗಾಳಿ ಗೊತ್ತಿಲ್ಲ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಅಲ್ಲದೆ, ದೇಶದಲ್ಲಿನ ಬೆಲೆ ಏರಿಕೆಗೆ ಕೇಂದ್ರ ಹಣಕಾಸು ಸಚಿವರೇ ಹೊಣೆಯಾಗಿದ್ದು, ಅವರು ಯಾರನ್ನೂ ಸಂಪರ್ಕಿಸುವುದಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರಕ್ಕೆ ಅರ್ಥಶಾಸ್ತ್ರವು ಅರ್ಥವಾಗುತ್ತಿಲ್ಲ. ಈ ಬಗ್ಗೆ ಪ್ರಧಾನಿ ಅಥವಾ ಹಣಕಾಸು ಸಚಿವರಿಗೆ ಗಂಧಗಾಳಿ ಗೊತ್ತಿಲ್ಲ. ಈ ವಿಚಾರವಾಗಿ ಅವರು ಯಾರ ಬಳಿಯಲ್ಲೂ ಸಮಾಲೋಚನೆ ನಡೆಸುವುದಿಲ್ಲ. ಬೆಳವಣಿಗೆ ದರ ಕುಸಿದಾಗ ಏನು ಮಾಡಬೇಕೆಂದು ಕೂಡ ಅವರಿಗೆ ತಿಳಿದಿಲ್ಲ’ ಎಂದು ತಮ್ಮದೇ ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ.

Join Whatsapp
Exit mobile version