ಹೆರಿಗೆ ವೇಳೆ ನವಜಾತ ಶಿಶುವಿನ‌ ಕೈ ಮುರಿತ; ದಾದಿಯರ ವಿರುದ್ಧ ಪ್ರಕರಣ ದಾಖಲು

Prasthutha|

ಚೆನ್ನೈ: ಹೆರಿಗೆ ಮಾಡಿಸುವ ವೇಳೆ ನವಜಾತ ಶಿಶುವಿನ‌ ಕೈ ಮುರಿದ ಘಟನೆ ಕೃಷ್ಣಗಿರಿ ಜಿಲ್ಲೆಯ ಹೊಸೂರಿನ ಉದ್ದನಪಲ್ಲಿಯಲ್ಲಿ ನಡೆದಿದೆ.

- Advertisement -


ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೊಸೂರು ನಗರದ ಕೊತ್ತೂರಿನ ಕೂಲಿಕಾರ್ಮಿಕ ಶಿವಕುಮಾರ್ ಎಂಬವರ ಪತ್ನಿ ವಸಂತ ಅವರನ್ನು ಹತ್ತಿರದ ಉದ್ಧನಪಲ್ಲಿ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು.


ಈ ವೇಳೆ ಆಸ್ಪತ್ರೆ ವೈದ್ಯೆ ಗೈರಾಗಿದ್ದ ಕಾರಣ ದಾದಿಯರೇ ಹೆರಿಗೆ ಮಾಡಿಸಿದ್ದರು. ಈ ವೇಳೆ ಮಗುವಿನ ಕೈ ಮುರಿದಿದ್ದು, ಮಗುವಿನ ಆರೋಗ್ಯ ಸ್ಥಿತಿ ಬಿಗಡಾಯಿಸಿದೆ. ತಕ್ಷಣ ಆಂಬುಲೆನ್ಸ್ ಮೂಲಕ ಹೊಸೂರು ಸರ್ಕಾರಿ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ.

- Advertisement -


ಮಗುವಿನ ಕೈ ಮುರಿದಿರುವ ಸುದ್ದಿ ತಿಳಿದು ಆಸ್ಪತ್ರೆ ಆವರಣದಲ್ಲಿ ಪೋಷಕರು ಗಲಾಟೆ ಮಾಡಿದ್ದಾರೆ. ಈ ವೇಳೆ ಮಧ್ಯೆ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join Whatsapp