ಮುಂದಿನ ಸಿಎಂ ಸಿದ್ದರಾಮಯ್ಯ: ಬೆಳಗಾವಿಯಲ್ಲಿ ವಿಪಕ್ಷ ನಾಯಕನ ಪರ ಘೋಷಣೆ

Prasthutha|

ಬೆಳಗಾವಿ: ನಿನ್ನೆ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆಯಿಂದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ಕಮಲಪಾಳಯದಲ್ಲಿ ಜೋರಾಗಿಯೇ ನಡೀತಿದೆ. ಹಲವರ ಹೆಸರುಗಳು ಸಿಎಂ ರೇಸ್​ ನಲ್ಲಿದ್ದು, ಬಿಜೆಪಿ ಹೈಕಮಾಂಡ್​ ಮುಂದಿನ ನಾಯಕನ ಬಗ್ಗೆ ಚರ್ಚೆ ನಡೆಸಿದೆ. ಇದರ ಬೆನ್ನಲ್ಲೇ ಇತ್ತ ಬೆಳಗಾವಿಯಲ್ಲಿ ‘ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ’ ಎಂದು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ.

- Advertisement -

ನೆರೆ ಪೀಡಿತ ಪ್ರದೇಶಗಳಲ್ಲಿ ಪ್ರವಾಸಕ್ಕೆಂದು ಆಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಈ ವೇಳೆ, ಅಭಿಮಾನಿಗಳು ಮತ್ತು ಕಾರ್ಯಕರ್ತರು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಘೋಷವಾಕ್ಯ ಕೂಗಿದರು. ಈ ಬಗ್ಗೆ ಸಿದ್ದರಾಮಯ್ಯ ಕೂಡ ತಮ್ಮ ಅಭಿಮಾನಿಗಳಿಗೆ ಏನೂ‌ ಸೂಚನೆ ಕೊಡದೇ ತಮ್ಮ ಪಾಡಿಗೆ ತಾವು ಕಾರಿನಲ್ಲಿ ಕುಳಿತು ಖಾನಾಪುರಕ್ಕೆ‌ ತೆರಳಿದರು.

Join Whatsapp